ಹದಗೆಟ್ಟ ವ್ಯವಸ್ಥೆ ವಿರುದ್ಧ ಆಕ್ರೋಶ, ಕೆಆರ್‌ಎಸ್ ಪಕ್ಷದಿಂದ ವಿನೂತನ ಪ್ರತಿಭಟನೆ, ರಸ್ತೆ ಗುಂಡಿಯಲ್ಲಿ ಹೂ ಚೆಲ್ಲಿ ಶ್ರದ್ಧಾಂಜಲಿ ಸಲ್ಲಿಕೆ

KRS INDI SHRUDDHANJALI

ಇಂಡಿ: ಗ್ರಾಮೀಣ ರಸ್ತೆಗಳು ಸಂಪೂರ್ಣ ಹಳ್ಳ ಹಿಡಿದಿದ್ದು, ಆಳೆತ್ತರದ ಗುಂಡಿಗಳಿಂದಾವೃತ್ತಗೊಂಡಿವೆ. ಹೀಗಾಗಿ ಸುಗಮ ಸಂಚಾರಕ್ಕೆ ಸಂಚಕಾರ ಉಂಟಾಗಿದ್ದು, ಸರ್ಕಾರದ ವಿರುದ್ಧ ವಿನೂತನವಾಗಿ ಹೋರಾಟ ಆರಂಭಿಸಿರುವ ಕಾರ್ಯಕರ್ತರು ಮಂಗಳವಾರ ಗುಂಡಿಗಳಲ್ಲಿ ಹೂ ಚೆಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಗುಂಡಿಮಯವಾದ ಗುಮ್ಮಟ ನಗರಿ, ಕೆಆರ್‌ಎಸ್ ಪಕ್ಷದಿಂದ ವಿನೂತನ ಪ್ರತಿಭಟನೆ

ಇಂಡಿ ನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತರು ಇಂಥದ್ದೊಂದು ವಿನೂತನ ಹೋರಾಟ ಹಮ್ಮಿಕೊಳ್ಳುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಇಡೀ ತಾಲೂಕಿನಲ್ಲಿ ರಸ್ತೆಗಳು ಹಾಳಾಗಿವೆ. ಜನ ಹಿಡಿಶಾಪ ಹಾಕುತ್ತಿದ್ದಾರೆ. ಇದೀಗ ಮಳೆಯಿಂದಾಗಿ ತೊಂದರೆ ಉಲ್ಭಣಿಸಿದೆ. ಜೀವ ಅಂಗೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕೆಂದು ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಅಶೋಕ ಜಾಧವ, ರಾಜ್ಯ ಸಂಘಟನಾ ಕಾರ್ಯದರ್ಶಿ ಗಣಪತಿ ರಾಠೋಡ, ಚಂದ್ರಕಾಂತ ನಗರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚಡಚಣ, ಕಾರ್ಯದರ್ಶಿ ಸುರೇಶ ನಿಂಬೊಣಿ, ಅಣ್ಣಪ್ಪ ಪೂಜಾರಿ, ನಾಗೇಶ ಸರಸಂಬಿ, ಮಲ್ಲು ಬಿರಾದಾರ. ರಂಜಾನ್ ಕೊಂಕಣಿ, ರಾಜು ಮತ್ತಿತರರಿದ್ದರು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…