ಮಹಿಳೆ ಮೇಲಿನ ಹಲ್ಲೆಗೆ ಆಕ್ರೋಶ

blank

ದೇವದುರ್ಗ: ತಾಲೂಕಿನ ಜಾಲಹಳ್ಳಿಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಮೃಗಗಳಂತೆ ವರ್ತನೆ ಮಾಡಿ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಕರವೇ (ನಾರಾಯಣಗೌಡ ಬಣ) ಮುಖಂಡರು ಮಂಗಳವಾರ ಮನವಿ ಸಲ್ಲಿಸಿದರು.

ಜಾಲಹಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣ ಸಮಾಜವೇ ತಲೆ ತಗ್ಗಿಸುವಂತ ಮಾಡಿದೆ. ಘಟನೆಗೆ ಕಾರಣರಾದವರನ್ನು ಬಂಧನ ಮಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇಂಥ ಘಟನೆಗಳು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಲಿವೆ. ಮಹಿಳೆಯನ್ನು ಹಾಡಹಗಲೆ ಮರಕ್ಕೆ ಕಟ್ಟಿಹಾಕಿ ಹೊಡೆಯುವ ಸಂಸ್ಕೃತಿಕ ಅನಾಗರಿಕತೆ ತೋರಿಸುತ್ತದೆ ಎಂದು ದೂರಿದರು.

ಕೂಡಲೇ ಹಲ್ಲೆ ಮಾಡಿವರನ್ನು ಬಂಧಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆ ವಿಧಿಸಬೇಕು. ನೊಂದ ಮಹಿಳೆ ಹಾಗೂ ಕುಟುಂಬಕ್ಕೆ ಸೂಕ್ತ ಭದ್ರತೆ ಒಗಿಸಬೇಕು. ಮುಂದೆ ಇಂಥ ಘಟನೆಗಳು ನಡೆಯದಂತೆ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಒತ್ತಾಯಿಸಿದರು. ತಾಲೂಕು ಅಧ್ಯಕ್ಷ ನಂದಪ್ಪ ಪಿ.ಮಡ್ಡಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಭೀಮಣ್ಣ ನಾಯಕ, ಬಸವ ಇದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…