ಮಗ್ಗಲ ಗ್ರಾಮದಲ್ಲಿ ಧರೆಗುರುಳಿದ ಬಾಳೆ ಗಿಡಗಳು

blank

ವಿರಾಜಪೇಟೆ: ವಿರಾಜಪೇಟೆ ಸುತ್ತಮುತ್ತ ಎರಡು ದಿನಗಳಿಂದ ಮಳೆಯಾಗುತ್ತಿದ್ದು ಬುಧವಾರ ರಾತ್ರಿ ಸುರಿದ ಗಾಳಿ ಮಳೆಗೆ ಬಾಳೆ ಗಿಡಗಳು ಹಾನಿಯಾಗಿವೆ.

blank


ವಿರಾಜಪೇಟೆ ಸಮೀಪದ ಮಗ್ಗುಲ ಗ್ರಾಮದ ರೈತ ಚೋಕಂಡ ಮಾದಪ್ಪ ಬೆಳೆದಿದ್ದ 1,200 ಬಾಳೆ ಗಿಡಗಳು ಗಾಳಿ ಮಳೆಗೆ ಧರೆಗುರುಳಿವೆ. ಇನ್ನೇನು ಬಾಳೆ ಕೊಯ್ಯುವ ಹಂತದಲ್ಲಿದೆ ಎನ್ನುವಷ್ಟರಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದ ಬೆಳೆಗಾರ ಕಂಗಾಲಾಗಿದ್ದಾರೆ.


ಸಾಲ ಮಾಡಿ ಬಾಳೆ ಬೆಳೆಸಿದ್ದೇನೆ. ಮುಂದಿನ ತಿಂಗಳ ಕೊನೆಯಲ್ಲಿ ಬಾಳೆ ಕೊಯ್ಯಲು ಪ್ರಾರಂಭಿಸಬೇಕಿತ್ತು. ಇದೀಗ ಗಾಳಿ-ಮಳೆಯಿಂದ ಬಾಳೆ ಗಿಡಗಳು ಧರೆಗೆ ಉರುಳಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಎಂದು ಬೆಳೆಗಾರ ಚೋಕಂಡ ಮಾದಪ್ಪ ಅಳಲನ್ನು ತೋಡಿಕೊಂಡರು. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…