ಬೆಂಗಳೂರು: ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೆಎಫ್ಡಿ ಇರ್ಫಾನ್ ಬಂಧಿತ ಆರೋಪಿ. ಈತ ಘಟನೆ ನಂತರ ತಲೆ ಮರೆಸಿಕೊಂಡಿದ್ದ. ಗಲಭೆಯಲ್ಲಿ ಇರ್ಫಾನ್ ಪ್ರಮುಖ ಪಾತ್ರ ವಹಿಸಿದ್ದ ಎಂಬುದನ್ನು ಪತ್ತೆ ಮಾಡಿದ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದರು.
ಗಲಭೆ ನಡೆದ ನಂತರ ಈತ ನಗರದಲ್ಲೇ ತಲೆ ಮರೆಸಿಕೊಂಡಿದ್ದ. ಇರ್ಫಾನ್ ಅಡಗಿರುವ ಸ್ಥಳ ಪತ್ತೆ ಹಚ್ಚಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕರೊನಾ ಹಾವಳಿ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರು ಪಾದರಾಯನಪುರವನ್ನು ಸೀಲ್ಡೌನ್ ಮಾಡುವಂತೆ ಸೂಚನೆ ನೀಡಿದ್ದರು. ಈ ಅವಧಿಯಲ್ಲಿ ಪಾದರಾಯನಪುರದಲ್ಲಿ ಅಡಗಿದ್ದ ಸೋಂಕಿತರನ್ನು ಕ್ವಾರಂಟೈನ್ಗೆ ಅಳವಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಪೊಲೀಸರ ನೆರವಿನೊಂದಿ ಏ.19ರ ಭಾನುವಾರ ಮಧ್ಯರಾತ್ರಿ ಮುಂದಾಗಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ನೂರಾರು ಮಂದಿ ಬೀದಿಗಿಳಿದು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. ಬ್ಯಾರಿಕೇಡ್ಗಳನ್ನು ಧ್ವಂಸಗೊಳಿಸಿದ್ದರು.
ಪ್ರಕರಣ ಸಂಬಂಧ ಪೊಲೀಸರು ಮಹಿಳೆ ಸೇರಿದಂತೆ 121 ಮಂದಿಯನ್ನು ಬಂಧಿಸಿದ್ದರು. ಇವರಲ್ಲಿ 5 ಮಂದಿಗೆ ಕರೊನಾ ಸೋಂಕು ಹರಡಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ 512ಕ್ಕೇರಿದ ಸೋಂಕಿತರ ಸಂಖ್ಯೆ- 193 ಮಂದಿ ಬಿಡುಗಡೆ: ನಿಮ್ಮ ಜಿಲ್ಲೆಯಲ್ಲಿ ಎಷ್ಟು?