ಬೆಂಗಳೂರು: ಪಾದರಾಯನಪುರ ಗಲಭೆ ಆರೋಪಿಗಳಲ್ಲಿ ಐವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಆರೋಪಿಗಳಿಗೆ ಕರೊನಾ ತಗುಲಿರುವ ಬೆನ್ನಲ್ಲೇ ಅಂದು ಕಾರ್ಯಾಚರಣೆ ನಡೆಸಿದ ಪೊಲೀಸರಲ್ಲೂ ಆತಂಕ ಶುರುವಾಗಿದೆ.
ಪಾದರಾಯನಪುರ ಆರೋಪಿಗಳ ಬಂಧನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸುಮಾರು 186 ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ. ಇಷ್ಟೆಲ್ಲದರ ಮಧ್ಯೆ ಗಲಭೆ ಪ್ರಕರಣ ಪ್ರಮುಖ ಆರೋಪಿ ಪತ್ತೆಯಾಗದೆ ಇರುವುದು ಇನ್ನೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕರೊನಾ ಆತಂಕದ ನಡುವೆಯೂ ಕೆಎಫ್ಡಿ ಇರ್ಫಾನ್ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಇರ್ಫಾನ್ ಜತೆಗೆ ಇನ್ನೂ ಒಂದಷ್ಟು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 126 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಇರ್ಫಾನ್ ಮತ್ತವನ ಗ್ಯಾಂಗ್ ಮೊಬೈಲ್ಗಳನ್ನೆಲ್ಲ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದೆ. ಸ್ಥಳೀಯರಿಂದಲೂ ಅವರ ಬಗ್ಗೆ ಮಾಹಿತಿ ಸಿಗುತ್ತಿಲ್ಲ. (ದಿಗ್ವಿಜಯ ನ್ಯೂಸ್)
ವೈದ್ಯರ ಮಹಾ ಎಡವಟ್ಟು; ಯುವತಿಯೋರ್ವಳಿಗೆ ಶಸ್ತ್ರಚಿಕಿತ್ಸೆ ಮಾಡಿದರು..ಹೊಟ್ಟೆಯೊಳಗೆ ಈ ವಸ್ತುವನ್ನೇ ಬಿಟ್ಟರು..!