ಪಾದರಾಯನಪುರ ಗಲಭೆ ಪ್ರಕರಣದ ಪ್ರಮುಖ ಆರೋಪಿ ಇನ್ನೂ ಪತ್ತೆಯಿಲ್ಲ..ಕರೊನಾ ಭಯದ ನಡುವೆಯೂ ಪೊಲೀಸರಿಂದ ತೀವ್ರ ಶೋಧ…

ಬೆಂಗಳೂರು: ಪಾದರಾಯನಪುರ ಗಲಭೆ ಆರೋಪಿಗಳಲ್ಲಿ ಐವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಆರೋಪಿಗಳಿಗೆ ಕರೊನಾ ತಗುಲಿರುವ ಬೆನ್ನಲ್ಲೇ ಅಂದು ಕಾರ್ಯಾಚರಣೆ ನಡೆಸಿದ ಪೊಲೀಸರಲ್ಲೂ ಆತಂಕ ಶುರುವಾಗಿದೆ. ಪಾದರಾಯನಪುರ ಆರೋಪಿಗಳ ಬಂಧನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸುಮಾರು 186 ಪೊಲೀಸರಿಗೆ ಕ್ವಾರಂಟೈನ್​ ಮಾಡಲಾಗಿದೆ. ಇಷ್ಟೆಲ್ಲದರ ಮಧ್ಯೆ ಗಲಭೆ ಪ್ರಕರಣ ಪ್ರಮುಖ ಆರೋಪಿ ಪತ್ತೆಯಾಗದೆ ಇರುವುದು ಇನ್ನೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರೊನಾ ಆತಂಕದ ನಡುವೆಯೂ ಕೆಎಫ್​ಡಿ ಇರ್ಫಾನ್​ಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. … Continue reading ಪಾದರಾಯನಪುರ ಗಲಭೆ ಪ್ರಕರಣದ ಪ್ರಮುಖ ಆರೋಪಿ ಇನ್ನೂ ಪತ್ತೆಯಿಲ್ಲ..ಕರೊನಾ ಭಯದ ನಡುವೆಯೂ ಪೊಲೀಸರಿಂದ ತೀವ್ರ ಶೋಧ…