blank

ಪಹಲ್ಗಾಮ್ ಭಯೋತ್ಪಾದಕ ದಾಳಿ ‘ಅನಾಗರಿಕ’; ಮೋದಿ ಶಾಂತಿಯನ್ನು ಪುನಃಸ್ಥಾಪಿಸುವ ಹೋರಾಟಗಾರ; ರಜನಿಕಾಂತ್ |Rajinikanth

blank

Rajinikanth| ಮುಂಬೈನಲ್ಲಿ ನಡೆದ ವಿಶ್ವ ಆಡಿಯೋ ವಿಷುಯಲ್ ಮತ್ತು ಮನರಂಜನಾ ಶೃಂಗಸಭೆ (WAVES) 2025 ರಲ್ಲಿ ರಜನಿಕಾಂತ್ ಭಾಗವಹಿಸಿದ್ದರು. ಅಲ್ಲಿ ಅವರು ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು.

ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಸೂಪರ್‌ಸ್ಟಾರ್, ಇದು “ಅನಾಗರಿಕ ಮತ್ತು ದಯೆಯಿಲ್ಲದ” ಕ್ರೂರ ಕೆಲಸವಾಗಿದೆ ಎಂದು ಕರೆದಿದ್ದಾರೆ. ಮತ್ತು ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಶಾಂತಿ ತರುವ ಹೋರಾಟಗಾರ ಎಂದು ರಜನಿಕಾಂತ್,​ ಮೋದಿಯನ್ನು ಹಾಡಿ ಹೊಗಳಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್​ನ ಈ ಮೂರು ಸ್ಥಳಗಳ ಮೇಲೆ ಕಣ್ಣಿಟ್ಟಿದ್ದ ಭಯೋತ್ಪಾದಕರು; Terror attack

ಪ್ರಧಾನಿ ಮೋದಿ ಒಬ್ಬ ಹೋರಾಟಗಾರ, ಅವರು ಎಂತಹ ಸವಾಲನ್ನೂ ಎದುರಿಸಬಲ್ಲರು. ಅದನ್ನು ಅವರು ನಿರೂಪಿಸಿದ್ದಾರೆ ಮತ್ತು ನಾವು ಕಳೆದ ಒಂದು ದಶಕಗಳಿಂದ ನೋಡುತ್ತಾ ಬಂದಿದ್ದೇವೆ. ಕಾಶ್ಮೀರದ ಪರಿಸ್ಥಿತಿಯನ್ನು ಅವರು ಧೈರ್ಯದಿಂದ ಮತ್ತು ಅದ್ಭುತವಾಗಿ ನಿಭಾಯಿಸಲಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಿ, ನಮ್ಮ ದೇಶಕ್ಕೆ ಕಳೆ ತರಲಿದ್ದಾರೆ ಎಂದು ಹೊಗಳಿದರು.

ಇದನ್ನೂ ಓದಿ: ಬೇಸಿಗೆ ಹಿನ್ನೆಲೆ ಕಿಡ್ನಿ ಸ್ಟೋನ್ ಪ್ರಕರಣ ಹೆಚ್ಚಾಗಬಹುದು; ನಿಮ್ಮಲ್ಲಿ ಇಂತಹ ಲಕ್ಷಣ ಕಂಡರೆ ಹುಷಾರ್| Kidney Stone

WAVES 2025 ಮನರಂಜನಾ ಕಾರ್ಯಕ್ರಮದಲ್ಲಿ ಪ್ರಮುಖ ತಾರೆಯರು ಜಗತ್ತಿನ ಜಾಗತಿಕ ನಾಯಕರು ಭಾಗಿಯಾಗಲಿದ್ದಾರೆ. ನಾಲ್ಕು ದಿನಗಳ ಈ ಕಾರ್ಯಕ್ರಮದಲ್ಲಿ, ಮನರಂಜನಾ ಉದ್ಯಮದ ಇತರ ಅನೇಕ ಪ್ರಭಾವಿ ವ್ಯಕ್ತಿಗಳೊಂದಿಗೆ, ಚಲನಚಿತ್ರ ಮತ್ತು ಡಿಜಿಟಲ್ ವಿಷಯದ ಭವಿಷ್ಯದ ಕುರಿತು ಪ್ರಮುಖ ಚರ್ಚೆಗಳನ್ನು ನಡೆಸಲಾಗುತ್ತದೆ. 2029 ರ ವೇಳೆಗೆ 50 ಶತಕೋಟಿ ಡಾಲರ್ ಮೌಲ್ಯದ ಮಾರುಕಟ್ಟೆಯನ್ನು ತೆರೆಯುವ ಗುರಿಯನ್ನು ಹೊಂದಿರುವ ಈ ಶೃಂಗಸಭೆಯು, ಜಾಗತಿಕ ಮನರಂಜನಾ ಆರ್ಥಿಕತೆಯಲ್ಲಿ ಭಾರತದ ಹೆಜ್ಜೆಗುರುತನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ.
(ಏಜೆನ್ಸೀಸ್)

ಪಹಲ್ಗಾಮ್​ನ ಈ ಮೂರು ಸ್ಥಳಗಳ ಮೇಲೆ ಕಣ್ಣಿಟ್ಟಿದ್ದ ಭಯೋತ್ಪಾದಕರು; Terror attack

Share This Article

ಯಾವುದೇ ಕೆಲಸಕ್ಕೆ ಹೊರಗೆ ಹೋಗುವಾಗ ಸೀನುವುದು ಒಳ್ಳೆಯದಲ್ಲ! ಇದು ಯಾವುದರ ಸೂಚನೆ ಎಂದು ನಿಮಗೆ ತಿಳಿದಿದೆಯೇ? Sneezing

Sneezing  : ನಾವು ಯಾವುದೇ ಪ್ರಮುಖ ಕೆಲಸದ ಮೇಲೆ ಹೊರಗೆ ಹೋದಾಗ, ಕೆಲವು ಅನಿರೀಕ್ಷಿತ ಘಟನೆಗಳು…

ನೀವು ಪ್ರತಿದಿನ ಬಿಸಿನೀರಿನಿಂದ ಸ್ನಾನ ಮಾಡುತ್ತೀರಾ? ಇದನ್ನು ತಿಳಿದುಕೊಳ್ಳಲೇಬೇಕು.. Bathing

Bathing : ಪ್ರತಿನಿತ್ಯ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ನಾವು ವಾತಾವರಣಕ್ಕೆ ಹೊಂದಿಕೆಯಾಗಿ ಬಿಸಿ, ತಣ್ಣಿರನ್ನು…