ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯಲ್ಲಿನ ಷೇರು ವಿನಿಮಯ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೇಳಿದ್ದಾರೆ.
ಷೇರು ವಿನಿಮಯ ಕೇಂದ್ರಕ್ಕೆ ಸೋಮವಾರ ನುಗ್ಗಿದ ನಾಲ್ವರು ಶಸ್ತ್ರಧಾರಿಗಳು ಗ್ರನೇಡ್ಗಳನ್ನು ಎಸೆದು, ಗುಂಡಿನ ಸುರಿಮಳೆ ಸುರಿಸಿದ್ದರಿಂದ ಇಬ್ಬರು ಗಾರ್ಡ್ಗಳು, ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದರು. ನಂತರ ಭದ್ರತಾಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ನಾಲ್ವರು ಶಸ್ತ್ರಧಾರಿಗಳು ಹತರಾಗಿದ್ದರು.
ಮಂಗಳವಾರ ನಡೆದ ಪಾಕ್ ಸಂಸತ್ತಿನ ಮಂಗಳವಾರದ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಇಮ್ರಾನ್ ಖಾನ್, ಈ ದಾಳಿಯ ಹಿಂದೆ ಭಾರತದ ಕೈವಾಡ ಇದೆ ಯಾವುದೇ ಯಾವುದೇ ಅನುಮಾನವಿಲ್ಲದೆ ಹೇಳಬಹುದಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ತಮ್ಮ ಈ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸದ ಅವರು, ಪಾಕಿಸ್ತಾನದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ವರದಿಗಳು ಬಂದಿದ್ದವು. ಈ ಕುರಿತು ಸಚಿವ ಸಂಪುಟದ ಕೆಲವು ಸಹೋದ್ಯೋಗಿಗಳೊಂದಿಗೆ ಚರ್ಚಿಸಿದ್ದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತದ ಮೊದಲ ಕೋವಿಡ್ ಚುಚ್ಚುಮದ್ದು ಕೊವಾಕ್ಸಿನ್ ಸಿದ್ಧವಾಗಿದ್ದು ಹೀಗೆ…
ಪಾಕಿಸ್ತಾನದ ಬೇಹುಗಾರಿಕಾ ಪಡೆಗಳು ನಾಲ್ಕು ಉಗ್ರರ ದಾಳಿಗಳ ಬಗ್ಗೆ ಮಾಹಿತಿ ನೀಡಿದ್ದವು. ಇಸ್ಲಾಮಾಬಾದ್ನಲ್ಲಿ ನಡೆಯಬೇಕಿದ್ದ ಎರಡು ದಾಳಿಯನ್ನು ವಿಫಲಗೊಳಿಸಲಾಗಿತ್ತು. ಆದರೆ ಎಲ್ಲಾ ದಾಳಿಗಳನ್ನು ವಿಫಲಗೊಳಿಸಲು ಸಾಧ್ಯವಾಗುವುದಿಲ್ಲ. ಕರಾಚಿ ದಾಳಿ ಅದಕ್ಕೆ ಸಾಕ್ಷಿ ಎಂದು ತಿಳಿಸಿದ್ದಾರೆ.
ಬಲೂಚಿಸ್ತಾನದಲ್ಲಿ ಪ್ರತ್ಯೇಕತಾ ಹೋರಾಟದಲ್ಲಿ ತೊಡಗಿರುವ ಬಲೂಚ್ ಲಿಬರೇಷನ್ ಆರ್ಮಿ ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಈ ಉಗ್ರರು ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಷೇರು ವಿನಿಮಯ ಕೇಂದ್ರಕ್ಕೆ ಬಂದಿದ್ದರು. ಕಟ್ಟಡದೊಳಗೆ ನುಸುಳಿ ಒಂದಷ್ಟು ಜನರನ್ನು ಒತ್ತೆಸೆರೆಯಲ್ಲಿ ಇರಿಸಿಕೊಳ್ಳುವುದು ಅವರ ಹುನ್ನಾರವಾಗಿತ್ತು. ಆದರೆ ತುಂಬಾ ಎಚ್ಚರಿಕೆಯಿಂದ ಇದ್ದ ಭದ್ರತಾಪಡೆಗಳು ಈ ದಾಳಿಯನ್ನು ವಿಫಲಗೊಳಿಸಿದ್ದಾಗಿ ಹೇಳಿದ್ದಾರೆ.
ಭೂಮಿ ಮೇಲೆ ಆಘ್ರಾಣಿಸಿ ಬಾಹ್ಯಾಕಾಶದ ವಾಸನೆ!