More

    ಆತ್ಮಾಹುತಿ ಬಾಂಬ್​ ದಾಳಿ; ಇದರ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ ಪಾಕ್​

    ನವದೆಹಲಿ: ಪಾಕಿಸ್ತಾನದಲ್ಲಿ ಶುಕ್ರವಾರ ಸಂಭವಿಸಿದ ಎರಡು ಪ್ರತ್ಯೇಕ ಆತ್ಮಾಹುತಿ ಬಾಂಬ್​ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಘಟನೆ ಹಿಂದೆ ಭಾರತದ ಗುಪ್ತಚರ ಸಂಸ್ಥೆ ರಾ ಕೈವಾಡ ಇದೆ ಎಂದು ಪಾಕಿಸ್ತಾನ ಸರ್ಕಾರ ಆರೋಪಿಸಿದೆ.

    ಈ ಕುರಿತು ಮಾತನಾಡಿರುವ ಪಾಕಿಸ್ತಾನದ ಆಂತರಿಕ ಸಚಿವ ಸರ್ಫರಾಜ್ ಬುಗ್ತಿ ಆತ್ಮಾಹುತಿ ದಾಳಿಯ ಹಿಂದೆ ಯಾರ ಕೈವಾಡ ಇದ್ದರೂ ಸಹ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ವೀರಶೈವ-ಲಿಂಗಾಯತರ ವಿರುದ್ಧ ಸಿದ್ದರಾಮಯ್ಯ ಪದೇ ಪದೇ ದ್ವೇಷ ಕಾರುತ್ತಿದ್ದಾರೆ: ಬಿಜೆಪಿ

    ಆತ್ಮಾಹುತಿ ಬಾಂಬ್​ ದಾಳಿಗೆ ಸಂಬಂಧಿಸಿದಂತೆ ಸರ್ಕಾರದ ಎಲ್ಲಾ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಆತ್ಮಾಹುತಿ ಬಾಂಬ್​ ದಾಳಿಯ ಹಿಂದೆ ಭಾರತದ ಗುಪ್ತಚರ ಸಂಸ್ಥೆ ರಾ ಭಾಗಿಯಾಗಿದೆ. ಈ ವಿಚಾರವನ್ನು ನಾವು ಗಂಭಿರವಾಗಿ ಪರಿಗಣಿಸಿದ್ದು, ಯಾರನ್ನೂ ಸುಮ್ಮನೇ ಬಿಡುವ ಮಾತಿಲ್ಲ ಎಂದು ಪಾಕಿಸ್ತಾನದ ಆಂತರಿಕ ಸಚಿವ ಸರ್ಫರಾಜ್ ಬುಗ್ತಿ ಹೇಳಿದ್ದಾರೆ.

    ಪಾಕಿಸ್ತಾನದಲ್ಲಿ ಶುಕ್ರವಾರ ನಡೆದ ಆತ್ಮಾಹುತಿ ಬಾಂಬ್​ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 65 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts