More

    ಉಗ್ರರ ಕುರಿತು ರಾಜ್​ನಾಥ್​ ಸಿಂಗ್​ ಹೇಳಿಕೆ; ಸಚಿವರ ಹೇಳಿಕೆಯನ್ನು ಖಂಡಿಸಿದ ಪಾಕಿಸ್ತಾನ

    ನವದೆಹಲಿ: ದೇಶದಲ್ಲಿ ಭಯೋತ್ಪಾದಕ ಚಟುವಟಿಗಳನ್ನು ನಡೆಸಲು ಪ್ರಯತ್ನಿಸಿದ ಬಳಿಕ ಗಡಿ ದಾಟಿ ಓಡಿ ಹೋಗುವ ಉಗ್ರರನ್ನು ಸೆದೆಬಡಿಯಲು ಭಾರತ, ಪಾಕಿಸ್ತಾನದ ಒಳಗೆ ನುಗ್ಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಹೇಳಿಕೆಯನ್ನು ಪಾಕ್​ ತೀವ್ರವಾಗಿ ಖಂಡಿಸಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ರಾಜ್​ನಾಥ್​ ಸಿಂಗ್​ ಅವರ ಹೇಳಿಕೆಯನ್ನು ಪ್ರಚೋದನಕಾರಿ ಮತ್ತು ಮಯೋಪಿಕ್​ ಎಂದು ಕರೆದಿದೆ.

    ಪ್ರಕಟಣೆಯಲ್ಲಿ ಏನಿದೆ?

    ರಾಜ್​ನಾಥ್​ ಸಿಂಗ್​​ ಅವರ ಹೇಳಿಕೆಯು ಪ್ರಚೋದನಕಾರಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಗಾಗಿ ತನ್ನ ಬದ್ಧತೆಯನ್ನು ತೋರಿಸಿದೆ. ಪಾಕಿಸ್ತಾನ ತನ್ನದೇ ಆದ ಭದ್ರತೆಗೆ ಸಮರ್ಥವಾಗಿದೆ ಮತ್ತು ನಾವು ಇದನ್ನು ಇತಿಹಾಸದಲ್ಲಿ ಮತ್ತೆ ಮತ್ತೆ ಸಾಬೀತುಪಡಿಸಿದ್ದೇವೆ ಎಂದು ಪಾಕಿಸ್ತಾನ ಸರ್ಕಾರದ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.

    ಇದನ್ನೂ ಓದಿ: ಕೊಹ್ಲಿ ಒಂದು ಬಾರಿ ಹೇರ್​ಸ್ಟೈಲ್​ ಮಾಡಿಸಿದರೆ ಅದರ ಬೆಲೆ ಎಷ್ಟು ಗೊತ್ತಾ?; ಆಚ್ಚರಿಯ ಹೇಳಿಕೆ ನೀಡಿದ ಆಲಿಮ್​ ಹಕೀಮ್​

    ವಿದೇಶಿ ನೆಲದಲ್ಲಿ ವಾಸಿಸುವ ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಯೋಜನೆಯ ಭಾಗವಾಗಿ 2020 ರಿಂದ ಪಾಕಿಸ್ತಾನದಲ್ಲಿ ಭಾರತ ಸರ್ಕಾರ 20 ಉಗ್ರರನ್ನು ಕೊಂದಿದೆ ಎಂದು ಬ್ರಿಟನ್‌ನ ಗಾರ್ಡಿಯನ್ ಪತ್ರಿಕೆ ವರದಿ ಮಾಡಿದ ಬೆನ್ನಲ್ಲೇ ರಾಜನಾಥ್​ ಸಿಂಗ್​ ಅವರು ಈ ಹೇಳಿಕೆಯನ್ನು ನೀಡಿದ್ದರು.

    ಭಾರತವು ಸದಾ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತದೆ. ಆದರೆ, ಯಾರಾದರೂ ಭಾರತದ ಮೇಲೆ ಕೋಪದ ಕಣ್ಣುಗಳನ್ನು ಬೀರಿದರೆ, ಭಾರತಕ್ಕೆ ಬಂದು ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಪ್ರಯತ್ನಿಸಿದರೆ, ನಾವು ಅವರನ್ನು ಬಿಡುವುದಿಲ್ಲ ಎಂದು ರಾಜನಾಥ್​ ಸಿಂಗ್​ ಎಚ್ಚರಿಕೆ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts