ಭಾರತೀಯ ಸಮುದಾಯಕ್ಕೆ “ಕತ್ತು ಕತ್ತರಿಸುವ” ಸನ್ನೆ ಮಾಡಿದ ಪಾಕ್​​ ಸೇನೆಯ ಅಧಿಕಾರಿ! Video viral

Video viral

Video viral: ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರನ್ನು ಬಲಿ ತೆಗೆದುಕೊಂಡ ನಂತರ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಹೆಚ್ಚುತ್ತಿದೆ. ಆದರೆ ಇದರ ನಡುವೆ ಪಾಕಿಸ್ತಾನ ಸೇನೆಯ ಹಿರಿಯ ಅಧಿಕಾರಿಯೊಬ್ಬರು ಲಂಡನ್‌ನಲ್ಲಿ ಪ್ರತಿಭಟನಾಕಾರರ ಕಡೆಗೆ ಬೆದರಿಕೆ ಸನ್ನೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಶುಕ್ರವಾರ (ಏ.25) ಲಂಡನ್‌ನಲ್ಲಿರುವ ಪಾಕಿಸ್ತಾನ ಹೈಕಮಿಷನ್ ಹೊರಗೆ ಭಾರತೀಯ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಸನ್ನೆ ಸೆರೆಯಾಗಿದೆ.

ಇದನ್ನೂ ಓದಿ: ಭಾರತ, ಪಾಕಿಸ್ತಾನ ಉದ್ವಿಗ್ನತೆ ಬಗೆಹರಿಸಿಕೊಳ್ಳಲಿವೆ ಎಂದ ಟ್ರಂಪ್| Donald Trump

ವಿಚಾರಣೆಗೆ ಒಳಗಾದ ಪಾಕಿಸ್ತಾನಿ ಅಧಿಕಾರಿಯನ್ನು ಲಂಡನ್‌ನಲ್ಲಿರುವ ಪಾಕಿಸ್ತಾನಿ ಸೇನೆ ಮತ್ತು ವಾಯು ಸಲಹೆಗಾರ ಕರ್ನಲ್ ತೈಮೂರ್ ರಹತ್ ಎಂದು ಗುರುತಿಸಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಅವರು ಭಾರತೀಯ ಸಮುದಾಯದ ಪ್ರತಿಭಟನಾಕಾರರಿಗೆ “ಕತ್ತು ಕತ್ತರಿಸುವ” ರೀತಿಯಲ್ಲಿ ಸನ್ನೆಮಾಡಿ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿರುವುದನ್ನು ಕಾಣಬಹುದು.

ಘಟನೆ ಏನು?

ಶುಕ್ರವಾರ (ಏ.25) ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಪಾಕಿಸ್ತಾನ ರಾಯಭಾರ ಕಚೇರಿಯ ಹೊರಗೆ 500 ಕ್ಕೂ ಹೆಚ್ಚು ಬ್ರಿಟಿಷ್ ಹಿಂದೂಗಳು ಪ್ರತಿಭಟನೆ ನಡೆಸಿದರು. ಭಾರತೀಯ ಸಮುದಾಯದ ಸದಸ್ಯರು ಭಾರತೀಯ ಧ್ವಜಗಳು, ಬ್ಯಾನರ್‌ಗಳು ಮತ್ತು ಫಲಕಗಳನ್ನು ಹಿಡಿದುಕೊಂಡು ಅಮಾಯಕರ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿ ಅವರಿಗೆ ಸರಿಯಾದ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು. ಭಯೋತ್ಪಾದಕ ಗುಂಪುಗಳಿಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನವನ್ನು ಖಂಡಿಸಿ ಅವರು ಘೋಷಣೆಗಳನ್ನು ಕೂಗಿದ್ದರು.

ಈ ಪ್ರತಿಭಟನೆಯ ಸಮಯದಲ್ಲಿ ಪಾಕಿಸ್ತಾನ ರಾಯಭಾರ ಕಚೇರಿಯೊಳಗಿನ ಅಧಿಕಾರಿಗಳು ಜೋರಾಗಿ ಸಂಭ್ರಮಾಚರಣೆಯ ಸಂಗೀತ ನುಡಿಸುತ್ತಿರುವುದು ಕಂಡುಬಂದಿದ್ದು, ಇದು ಗಾಯದ ಮೇಲೆ ಬರೆ ಎಳೆದಂತಿದೆ ಎಂದು ಎಂದು ಪ್ರತಿಭಟನೆಯ ಆಯೋಜಕರು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದ್ದಾರೆ. (ಏಜೆನ್ಸೀಸ್​) 

ಮತ್ತೆ ಹುಟ್ಟುತ್ತೀವಿ, ಮತ್ತೇ ಒಂದಾಗ್ತೀವಿ.. ಡೆತ್​​ನೋಟ್​ ಬರೆದಿಟ್ಟು ಸಾವಿಗೆ ಶರಣಾದ ಯುವ ಪ್ರೇಮಿಗಳು, ಹೆತ್ತವರಿಗೆ ಸಂದೇಶ | Death Note

Share This Article

ಒಂದು ದಿನಕ್ಕೆ ಒಬ್ಬರು ಎಷ್ಟು ಸಿಹಿ ತಿನ್ನಬೇಕು? ಇದರ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಹೇಳೊದೇನು? ಇಲ್ಲಿದೆ ಮಾಹಿತಿ..| WHO

WHO: ನೀವು ಪ್ರತಿದಿನ ಸಿಹಿ ತಿನ್ನುತ್ತಿದ್ದೀರಾ? ದಿನಂಪ್ರತಿ ಸಿಹಿತಿಂಡಿಗಳು-ಚಾಕಲೇಟ್​ ಸೇರಿದಂತೆ ಸಿಹಿ ಪಾನೀಯಗಳು ಸೇವನೆಯ ಅಭ್ಯಾಸವು…

ಅಡುಗೆಮನೆಯಲ್ಲಿ ಈ ಫೋಟೋವನ್ನು ಇಟ್ಟರೆ, ಮನೆಯಲ್ಲಿ ಅದೃಷ್ಟ, ಸಂಪತ್ತು ಸದಾ ತುಂಬಿರುತ್ತದಂತೆ! Vastu Tips

Vastu Tips: ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ವಿಶೇಷ ಮಹತ್ವವಿದೆ. ವಾಸ್ತು ತತ್ವಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು…

ಫ್ರಿಡ್ಜ್​​​ನಲ್ಲಿಟ್ಟ ಮಾಂಸ ತಿನ್ನುತ್ತಿದ್ದೀರಾ? ನೀವು ಇದನ್ನು ಖಂಡಿತ ತಿಳಿದುಕೊಳ್ಳಬೇಕು..meat

meat: ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ರೆಫ್ರಿಜರೇಟರ್‌ಗಳು ಅತ್ಯಗತ್ಯವಾಗಿರುತ್ತವೆ. ಪ್ರತಿಯೊಂದು ವಸ್ತುವನ್ನು ಫ್ರಿಡ್ಜ್‌ನಲ್ಲಿ ಇಡುವುದನ್ನು ಅವರು…