ನವದೆಹಲಿ: ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. 17ರಿಂದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮವೂ ಆರಂಭವಾಗಿದೆ. ಈ ಬಗ್ಗೆ ಇತ್ತೀಚೆಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ರಾಮನ ಫೋಟೋವನ್ನು ಹಂಚಿಕೊಂಡಿದ್ದಾರೆ.
ಗುರುವಾರ ರಾಮ ಮಂದಿರದ ಗರ್ಭಗುಡಿಯಲ್ಲಿ ನೂತನ ರಾಮನ ವಿಗ್ರಹವನ್ನು ಇರಿಸಲಾಗಿದ್ದು, ಪ್ರಪಂಚದಾದ್ಯಂತ ಚರ್ಚೆಯಾಗುತ್ತಿದೆ. ಸಾಮಾಜಿಕ ಮಾಧ್ಯಮವು ಚರ್ಚೆಗಳಿಂದ ತುಂಬಿದೆ. ಅನೇಕ ಸೆಲೆಬ್ರಿಟಿಗಳು ರಾಮನ ವಿಗ್ರಹದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವರಲ್ಲಿ ಪಾಕಿಸ್ತಾನಿ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಕೂಡ ಸೇರಿದ್ದಾರೆ. ಅವರು ಹೊಸ ಪ್ರತಿಮೆಯ ಚಿತ್ರವನ್ನು ಹಂಚಿಕೊಂಡಿದ್ದು ಮಾತ್ರವಲ್ಲದೆ ಅದ್ಭುತವಾದ ಭಕ್ತಿ ಶೀರ್ಷಿಕೆಯನ್ನು ಸಹ ಬರೆದಿದ್ದಾರೆ.
ಕನೇರಿಯಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಲ್ಲಿ “ನನ್ನ ರಾಮಲಲ್ಲಾ ಕುಳಿತಿದ್ದಾರೆ” ಎಂದು ಬರೆದಿದ್ದಾರೆ. ರಾಮಮಂದಿರದ ಬಗ್ಗೆ ಕನೇರಿಯಾ ಪ್ರತಿಕ್ರಿಯಿಸಿರುವುದು ಇದೇ ಮೊದಲಲ್ಲ ಎಂಬುದು ಗಮನಾರ್ಹ. ರಾಮಮಂದಿರ ಉದ್ಘಾಟನೆಯ ದಿನದಂದು ವಿಶೇಷ ರಜೆ ನೀಡಿದ ಮಾರಿಷಸ್ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದು ಸೇರಿದಂತೆ ಅವರು ಈ ಹಿಂದೆ ಹಲವಾರು ಸಂದರ್ಭಗಳಲ್ಲಿ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ದೇಶದೆಲ್ಲೆಡೆ ಭಾರೀ ಸಂಭ್ರಮ ಮನೆ ಮಾಡಿದೆ. ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರಗಳ ಪ್ರಮುಖರು ಆಗಮಿಸುವ ನಿರೀಕ್ಷೆ ಇದ್ದು, ಹಲವಾರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ಕಳುಹಿಸಲಾಗಿದೆ.
मेरे रामलला विराजमान हो गए 😍 pic.twitter.com/mZX1jpLlT9
— Danish Kaneria (@DanishKaneria61) January 19, 2024
ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ ಮತ್ತು ಹರ್ಭಜನ್ ಸಿಂಗ್ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಆದರೆ, ಇವರಲ್ಲಿ ಯಾರು ಅಯೋಧ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ. ವರದಿಗಳ ಪ್ರಕಾರ, ವಿರಾಟ್ ಕೊಹ್ಲಿ ಸಮಾರಂಭಕ್ಕಾಗಿ ಅಯೋಧ್ಯೆಗೆ ಹೋಗಲು ಬಿಸಿಸಿಐನಿಂದ ಅನುಮತಿ ಕೇಳಿದ್ದಾರೆ, ಆದರೆ ಅಧಿಕೃತ ದೃಢೀಕರಣ ಇನ್ನೂ ಬರಬೇಕಿದೆ.
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯ ಅರ್ಚಕರ ತಂಡದಲ್ಲಿ ಕನ್ನಡ ನಾಡಿನ ವಿದ್ವಾಂಸ