More

    2ಎ ಮೀಸಲಾತಿಗೆ ಒತ್ತಾಯಿಸಿ ರಸ್ತೆ ತಡೆ

    ರಾಣಿಬೆನ್ನೂರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಧರಣಿ 50ನೇ ದಿನಕ್ಕೆ ಕಾಲಿಡುತ್ತಿದ್ದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
    ನಗರದ ತಾಲೂಕು ಆಡಳಿತ ಸೌಧದ ಬಳಿ ಹಳೆ ಪಿ.ಬಿ.ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ನಂತರ ತಹಸೀಲ್ದಾರ್ ಕೆ.ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.
    ಮೀಸಲಾತಿ ನೀಡುವುದಾಗಿ ಮಾತು ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು ತಪ್ಪಿದ್ದಾರೆ. ಆದಷ್ಟು ಬೇಗ ನಮ್ಮ ಬೇಡಿಕೆ ಪೂರೈಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಭೆಯಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಸಮಾಜದ ಗ್ರಾಮೀಣ ಘಟಕದ ಅಧ್ಯಕ್ಷ ಸಿದ್ದಪ್ಪ ಚಿಕ್ಕಬಿದರಿ, ಶಹರ ಘಟಕದ ಅಧ್ಯಕ್ಷ ಶಿವಪ್ಪ ಗುರಿಕಾರ, ರಾಜಣ್ಣ ಮೋಟಗಿ, ಎ.ಬಿ.ಪಾಟೀಲ, ಮಹೇಶ ಪಾಟೀಲ, ಬಸವರಾಜ ಬೆನಕನಕೊಂಡ, ಶಂಕರ ದಾನಪ್ಪನವರ, ಶಿವಪ್ಪ ಕುರವತ್ತಿ, ಗಂಗಾಧರ ಬೂದನೂರ, ಕೊಟ್ರೇಶಪ್ಪ ಎಮ್ಮಿ, ಪ್ರಭಾವತಿ ತಿಳವಳ್ಳಿ, ನಾಗರಾಜ ಮೋಟಗಿ, ಅಮೋಘ ಬದಾಮಿ, ದುಂಡೆಪ್ಪ ಬೆಲ್ಲದ, ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts