ಮಳೆಯ ಕಾರಣ ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿದ ಕುಮಾರಸ್ವಾಮಿ…

ಬೆಂಗಳೂರು: ನಾಳೆಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಹೇಳಿದ್ದಾರೆ. ಪೂರ್ವ ನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ತದನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್ ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯಬೇಕಿತ್ತು. ತುಮಕೂರು … Continue reading ಮಳೆಯ ಕಾರಣ ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿದ ಕುಮಾರಸ್ವಾಮಿ…