More

    ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಪಂಚಮಸಾಲಿ ಸಮಾಜ ಆಕ್ರೋಶ

    ಬಾಗಲಕೋಟೆ: ಪಂಚಮಸಾಲಿ ಮುಖಂಡರಾದ ವಿನಯ್ ಕುಲಕರ್ಣಿ ಹಾಗೂ ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಪಂಚಮಸಾಲಿ ಫೇಸ್​ಬುಕ್​ ಪೇಜ್​ನಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಪಂಚಮಸಾಲಿ ಮುಂಚೂಣಿ ನಾಯಕರಾದ ಈ ಇಬ್ಬರನ್ನು ಸೇರಿಸಿಕೊಳ್ಳದಿದ್ರೆ ಸಮೂಹವನ್ನು ಕಡೆಗಣಿಸಿದಂತೆ. ಪಂಚಮಸಾಲಿ ಮೀಸಲಾತಿಗಾಗಿ ದುಡಿದವರಿಗೆ ಅವಕಾಶ ಸಿಗಬೇಕು. ಸಮಾಜದಲ್ಲಿ ಈ ಇಬ್ಬರು ಯುವ ನಾಯಕರು ಬೆಳೆಯುತ್ತಾರೆ ಅಂತ ಕುಂಟು ನೆಪಹೇಳಿ, ಕಾಂಗ್ರೆಸ್ ಪಕ್ಷದ ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರದಿಂದ ಇಬ್ಬರಿಗೂ ಸಚಿವ ಸ್ಥಾನ ತಪ್ಪಿಸಿದ್ದಾರೆಂದು ಅನುಮಾನ ಹೊರಹಾಕಿದ್ದಾರೆ.

    ಇದನ್ನೂ ಓದಿ: ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಪ್ರಕರಣ ಚುರುಕು: ಮಂಡ್ಯ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆ

    ಈ ಬಗ್ಗೆ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಸಹ ಬೇಸರ ಹೊರಹಾಕಿದ್ದಾರೆ ಎಂದು ಫೇಸ್​ಬುಕ್​ ಪೋಸ್ಟ್​ನಲ್ಲಿ ಉಲ್ಲೇಖಿಸಲಾಗಿದೆ. ಇವರಿಬ್ಬರಿಗೂ ಸಚಿವ ಸ್ಥಾನ ಕೊಡದೇ ಇದ್ದರೆ, ಈಗ ಕಾಂಗ್ರೆಸ್ ಬೆಂಬಲಿಸಿದ ಪಂಚಮಸಾಲಿ ಸಮಾಜ, ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನು ನೀಡಿದೆ.

    ಸಮಾಜದ ಬಾಂಧವರು ಸಚಿವ ಸ್ಥಾನ ತಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಫೇಸ್​ಬುಕ್ ಮೂಲಕ ಕರೆ ಕೊಡಲಾಗಿದೆ. (ದಿಗ್ವಿಜಯ ನ್ಯೂಸ್​)

    ಎಜುಕೇಷನ್ ಎಕ್ಸ್‌ಪೋ ಇಂದಿನಿಂದ: ಜಯನಗರ 5ನೇ ಬ್ಲಾಕ್‌ನ ಶಾಲಿನಿ ಮೈದಾನದಲ್ಲಿ ಆಯೋಜನೆ, ರಾಮಲಿಂಗಾ ರೆಡ್ಡಿ ಚಾಲನೆ

    ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ಕೊಡದಿದ್ರೆ ಕಾಂಗ್ರೆಸ್​ ಕಚೇರಿ ಮುಂದೆ ಸಾಯ್ತೀನಿ! ಅಭಿಮಾನಿಯ ಪತ್ರ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts