More

    ಪರಪ್ಪನ ಅಗ್ರಹಾರದಲ್ಲಿ 22 ಕೈದಿಗಳಿಗೆ ಕರೊನಾ

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೂ ಕರೊನಾ ಸೋಂಕು ವ್ಯಾಪಿಸಿದೆ. 22 ವಿಚಾರಣಾಧೀನ ಕೈದಿಗಳಲ್ಲಿ ಬುಧವಾರ ಸೋಂಕು ಕಾಣಿಸಿಕೊಂಡಿದೆ. ಆದರೆ, ಇವರ ಸೋಂಕಿನ ಮೂಲ ಕಂಡು ಬಾರದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

    ಮುಂಜಾಗ್ರತಾ ಕ್ರಮವಾಗಿ 2 ತಿಂಗಳ ಅವಧಿಯಲ್ಲಿ ಜೈಲು ಸೇರಿದ ಆರೋಪಿಗಳಿಗೆ ಕ್ವಾರಂಟೈನ್​ಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿ ನಿರೀಕ್ಷಿಸಲಾಗಿದೆ. ಜೈಲಿನಲ್ಲಿ ಸೋಂಕು ಹರಡುವಿಕೆ ತಡೆಗೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ರಾಜ್ಯ ಬಂದೀಖಾನೆ ಇಲಾಖೆಯ ಡಿಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ.

    ಇದನ್ನೂ ಓದಿ: 4ರಿಂದ ಕರ್ನಾಟಕ-ಕೇರಳ ಗಡಿ ಬಂದ್: ಕೇರಳ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ

    ನಿಮ್ಹಾನ್ಸ್​ನಲ್ಲಿ 5 ಸಿಬ್ಬಂದಿಗೆ ಸೋಂಕು: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮತ್ತೆ ಐದು ಸಿಬ್ಬಂದಿಗೆ ಸೋಂಕು ತಗಲಿದೆ. ಈವರೆಗೆ ಒಟ್ಟು 15 ಸಿಬ್ಬಂದಿ ಸೋಂಕಿಗೆ ಒಳಗಾಗಿದ್ದಾರೆ. ಸಾಮಾನ್ಯ ಚಿಕಿತ್ಸಾ ವಿಭಾಗದ ಸ್ಥಾನಿಕ ವೈದ್ಯಾಧಿಕಾರಿ, ಸ್ಟಾಫ್ ನರ್ಸ್, ಸ್ವಚ್ಛತಾ ನೌಕರ, ಲ್ಯಾಬ್​ನ ಡೇಟಾ ಆಪರೇಟರ್, ರಕ್ತನಿಧಿ ಕೇಂದ್ರದ ಸ್ಟಾಫ್ ನರ್ಸ್​ಗೆ ಸೋಂಕು ತಗುಲಿದೆ. ತುರ್ತು ಚಿಕಿತ್ಸೆ ಹಾಗೂ ಸಾಮಾನ್ಯ ಚಿಕಿತ್ಸಾ ವಿಭಾಗವನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

    ಭಾರಿ ಮಳೆಗೆ ಕಿತ್ಕೊಂಡು ಹೋಯ್ತು ಸೇತುವೆ- ಎಸ್ಸೆಎಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಗ್ನಿಶಾಮಕದಳದ ನೆರವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts