ಪರಶುರಾಮನ 33 ಅಡಿ ಎತ್ತರದ ಪ್ರತಿಮೆ ಬೆಳಗಾಗುವುದರೊಳಗೆ ನಾಪತ್ತೆ!

blank

ಉಡುಪಿ: ಬಿಜೆಪಿ ಸರ್ಕಾರ 8 ತಿಂಗಳ ಹಿಂದೆ ಉದ್ಘಾಟನೆ ಮಾಡಿದ್ದ ಪರಶುರಾಮ ಥೀಮ್​ ಪಾರ್ಕ್​ನ 33 ಅಡಿ ಎತ್ತರದ ಪರಶುರಾಮನ ಮೂರ್ತಿ ರಾತ್ರೋರಾತ್ರಿ ನಾಪತ್ತೆ ಆಗಿದೆ. ಪ್ರತಿಮೆ ಕಳಪೆಯಾಗಿತ್ತು ಎಂಬ ಆರೋಪ ಕೇಳಿ ಬಂದ ಕೆಲವೇ ದಿನಗಳಲ್ಲಿ ಹೀಗಾಗಿರುವುದು ನಿರ್ಮಾಣದ ಗುಣಮಟ್ಟದ ಕುರಿತ ಅನುಮಾನವನ್ನು ಬಲವಾಗಿಸಿದೆ.

blank

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್ಲು ಬೆಟ್ಟದ ಮೇಲಿನ ಈ 33 ಅಡಿ ಎತ್ತರದ ಪರಶುರಾಮ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಇದನ್ನೊಳಗೊಂಡ ಪರಶುರಾಮ ಥೀಮ್ ಪಾರ್ಕ್ ಇದೇ ಜ. 27ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆಗೊಂಡಿತ್ತು.

ಇದನ್ನೂ ಓದಿ: ಭಿಕ್ಷೆ ಬೇಡುತ್ತಿದ್ದ ವಿದೇಶಿ ಮಹಿಳೆಯ ಬದುಕು ಬದಲಿಸಿದ ಭಾರತೀಯ; ಯಾರೀಕೆ, ಈಗೇನು ಮಾಡುತ್ತಿದ್ದಾರೆ?

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಉದ್ಘಾಟನೆಯಾಗಿದ್ದ ಈ ಥೀಮ್​ ಪಾರ್ಕ್ ಶಾಸಕ ಸುನೀಲ್​ಕುಮಾರ್​ಗೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಆದರೆ ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರತಿಮೆ ಗುಣಮಟ್ಟದ ಕುರಿತು ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: ನಾನೂ ಪರಶುರಾಮನ ಭಕ್ತ: ಮುಖ್ಯಮಂತ್ರಿ ಬೊಮ್ಮಾಯಿ ಹೇಳಿಕೆ; ಕಾರ್ಕಳದಲ್ಲಿ ಥೀಂ ಪಾರ್ಕ್ ಉದ್ಘಾಟನೆ

ಕಂಚಿನದ್ದು ಎನ್ನಲಾದ ಪ್ರತಿಮೆಯನ್ನು ಗ್ರಾಸ್​​ ಫೈಬರ್ ಹಾಗೂ ಪಿಒಪಿಯಿಂದ ನಿರ್ಮಾಣ ಮಾಡಲಾಗಿತ್ತು ಎಂಬ ಆರೋಪ ಬಂದಿತ್ತು. ಈ ವಿಚಾರ ತೀವ್ರ ಚರ್ಚೆಗೆ ಒಳಗಾಗಿದ್ದು, ಪರ-ವಿರೋಧ ಟೀಕೆಗೆ ವಸ್ತುವಾಗಿರುವ ನಡುವೆಯೇ ನಿನ್ನೆ ರಾತ್ರಿಯೇ ಈ ಪ್ರತಿಮೆ ನಾಪತ್ತೆ ಆಗಿದೆ. ಇದೀಗ ಈ ವಿಚಾರ ಭಾರಿ ಚರ್ಚೆಗೀಡಾಗಿದೆ.

‘ದೇಶದ ಕುರಿತ ಮೈಂಡ್​ಸೆಟ್ ಬದಲಿಸುತ್ತೇನೆ’ ಅಂತ ಹೊರಟ ಮಿಸ್​ ಯೂನಿವರ್ಸ್ ಸ್ಪರ್ಧಿಗೆ ಆರಂಭದಲ್ಲೇ ಹಿನ್ನಡೆ!

ಕಾಂಗ್ರೆಸ್​ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾನೆ ‘ರಾಮಾಯಣದ ಹನುಮಂತ’; ಎಲ್ಲಿ, ಯಾರ ವಿರುದ್ಧ?

Share This Article
blank

ಕಾಲುಗಳಲ್ಲಿ ರಕ್ತನಾಳಗಳು ಗೋಚರಿಸಲು ಕಾರಣ ಏನು ಗೊತ್ತೆ?: ಅಪಾಯದ ಬಗ್ಗೆ ಅರಿವಿರಲಿ | Visible Veins

Visible Veins: ನಿಮ್ಮ ಕಾಲುಗಳಲ್ಲಿ ಅಥವಾ ನಮ್ಮ ಅಕ್ಕಪಕ್ಕದವರ ಮನೆಯಲ್ಲಿನ ಕೆಲವರಿಗೆ ಈ ರಕ್ತನಾಳಗಳು ಗೋಚರಿಸಿರುವುದು…

ಸಾಲ ಕೊಡಬೇಡಿ.. ನಿಮಗೆ ಸಮಸ್ಯೆಗಳು ಎದುರಾಗುತ್ತವೆ! money

money : ಸಂತೋಷ ಮತ್ತು ದುಃಖಗಳಿಂದ ತುಂಬಿರುವ ಜೀವನದಲ್ಲಿ ಹಣವು ಎಲ್ಲದಕ್ಕೂ ಮೂಲ ಮೂಲ ಎಂದು…

blank