ಬೆಳೆ ನಷ್ಟ ಪರಿಹಾರಕ್ಕೆ ಪರಶುರಾಮಪುರ ರೈತರ ಮನವಿ

parashuramapura crop loss

ಪರಶುರಾಮಪುರ: ಅಧಿಕ ಮಳೆ ಹಾಗೂ ರೋಗಬಾಧೆಯಿಂದ ಹೋಬಳಿಯಲ್ಲಿ ಸಾವಿರಾರು ಎಕರೆ ಶೇಂಗಾ ಬೆಳೆ ನಷ್ಟವಾಗಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕಳೆದ ಹತ್ತಾರು ವರ್ಷಗಳಿಂದ ಮಳೆಯಾಶ್ರಿತ ಖುಷ್ಕಿ ಭೂಮಿಯಲ್ಲಿ ಶೇಂಗಾ ಬಿತ್ತಿ ಸಂಕಷ್ಟ ಅನುಭವಿಸುತ್ತಿದ್ದ ಹೋಬಳಿಯ ರೈತರಿಗೆ ಈ ಬಾರಿ ಅಧಿಕ ಮಳೆ ಕೂಡ ಸಮಸ್ಯೆ ತಂದೊಡ್ಡಿದೆ. ಜಾನುವಾರುಗಳಿಗೂ ಮೇವು ಸಿಗದ ಪರಿಸ್ಥಿತಿ ಎದುರಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಹೋಬಳಿಯ 85 ಸಾವಿರ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಶೇಂಗಾ ಬಿತ್ತನೆ ಮಾಡಲಾಗಿತ್ತು. ಆರಂಭದಲ್ಲಿ ಸುರಿದ ಉತ್ತಮ ಮಳೆಯಿಂದ ಸಸಿಗಳನ್ನು ಸಮೃದ್ಧವಾಗಿ ಬೆಳೆದಿದ್ದವು. ಆದರೆ ನಂತರ ಸುರಿದ ಮಳೆಯಿಂದ ನಷ್ಟ ಅನುಭವಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಹೋಬಳಿಯಲ್ಲಿ ಬೆಳೆದಿದ್ದ ಶೇ.50 ಕ್ಕಿಂತ ಹೆಚ್ಚು ಬೆಳೆ ನಷ್ಟವಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ರೈತರಾದ ಪುರ‌್ಲೆಹಳ್ಳಿ ರಾಘವೇಂದ್ರ, ಹೊನ್ನೇಶಪ್ಪ ಇತರರು ಆಗ್ರಹಿಸಿದ್ದಾರೆ.

ಪರಶುರಾಮಪುರ ಹೋಬಳಿಯಲ್ಲಿ ರೋಗದಿಂದ ಶೇಂಗಾ ಬೆಳೆ ಇಳುವರಿ ಕುಂಠಿತವಾದರೆ, ನಂತರ ಮಳೆ ಬಂದು ಫಸಲು ರೈತರ ಕೈಗೆ ಸಿಗದಂತಾಗಿದೆ.

| ಹೇಮಂತಕುಮಾರ ಕೃಷಿ ಅಧಿಕಾರಿ, ಪರಶುರಾಮಪುರ ರೈತ ಸಂಪರ್ಕ ಕೇಂದ್ರ

 

Share This Article

ಈ ಸಮಯದಲ್ಲಿ ನೀವು ನಿಂಬು ಜ್ಯೂಸ್​​ ಕುಡಿದರೆ ಅಪಾಯವಾಗಬಹುದು..ಎಚ್ಚರ! Lemon Water

Lemon Water: ಬೇಸಿಗೆಯ ಬಿಸಿಲಿಗೆ ಬೆವೆತು ದೇಹವನ್ನು ತಂಪಾಗಿಸಲು ಮತ್ತು ದಾಹವನ್ನು ನೀಗಿಸಲು ನಾವು ಸಾಮಾನ್ಯವಾಗಿ…

ರಾತ್ರಿ ಚೆನ್ನಾಗಿ ನಿದ್ದೆ ಮಾಡಬೇಕೆಂದರೆ ಈ ಒಂದು ಕೆಲಸ ಮಾಡಿ: ಬೆಳಗ್ಗೆ ಉತ್ಸಾಹದಿಂದ ಎದ್ದೇಳಬಹುದು.. sleeping tips

sleeping tips : ಸಾಕಷ್ಟು ನಿದ್ರೆ ಬರದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ನಾವು ಎಷ್ಟು…

ಮಧ್ಯರಾತ್ರಿ ಕಳೆದರೂ ನಿದ್ದೆ ಬರ್ತಿಲ್ವಾ? ಹಾಗಾದರೆ ಈ ಸಮಸ್ಯೆಗಳನ್ನು ಎದುರಿಸಲು ನೀವು ರೆಡಿಯಾಗಿ! Sleep

Sleep : ಇಂದಿನ ಕಾರ್ಯನಿರತ ಜೀವನದಲ್ಲಿ ಕಾಲದ ಜೊತೆಗೆ, ಜನರ ಜೀವನಶೈಲಿಯಲ್ಲಿಯೂ ಅನೇಕ ದೊಡ್ಡ ಬದಲಾವಣೆಗಳಾಗಿವೆ.…