blank

ದೇಶದ ಸ್ವಾತಂತ್ರ್ಯಕ್ಕೆ ಕಾಂಗ್ರೆಸ್ ಹೋರಾಟ: ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿಕೆ

Parashurampur, Congress, independence day

ಪರಶುರಾಮಪುರ: ಕಾಂಗ್ರೆಸ್ ಪಕ್ಷ ನಡೆಸಿದ ಸ್ವಾತಂತ್ರ್ಯ ಚಳವಳಿ ಅವಿಸ್ಮರಣೀಯವಾಗಿದ್ದು, ಪಕ್ಷದ ವಿರುದ್ಧ ಸುಳ್ಳು ಪ್ರಚಾರವನ್ನು ಜನ ನಂಬುವುದಿಲ್ಲ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹೇಳಿದರು.

ಸ್ವಾತಂತ್ರೃ ದಿನಾಚರಣೆ ಅಂಗವಾಗಿ ಮೋದೂರು ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಇತಿಹಾಸ ತಿರುಚಲು ಬಿಜೆಪಿ ಹವಣಿಸುತ್ತಿದೆ. ಇದು ಖಂಡನೀಯ. ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆರಂಭಿಸಿದ ಪಾದಯಾತ್ರೆ ಮುಂಬರುವ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿ ಆಗಲಿದೆ ಎಂದರು.

ಹಿರಿಯ ಮುಖಂಡ ಪ್ರಭುದೇವ, ಕೆಪಿಸಿಸಿ ಸದಸ್ಯ ವೀರಭದ್ರಬಾಬು, ಜಿಪಂ ಮಾಜಿ ಸದಸ್ಯರಾದ ಬಾಬುರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಟಿ.ರವಿಕುಮಾರ, ಮಾಜಿ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ನಗರಸಭೆ ಅಧ್ಯಕ್ಷೆ ಸುಮಕ್ಕ, ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಗೀತಾಬಾಯಿ, ಬ್ಲಾಕ್ ಅಧ್ಯಕ್ಷ ತಿಪ್ಪೇಸ್ವಾಮಿ, ಯುವ ಘಟಕದ ಅಧ್ಯಕ್ಷ ಸೂರನಹಳ್ಳಿ ಶಿವಕುಮಾರ, ಗ್ರಾಪಂ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷ ಹೇಮಂತರಾಜು, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಎ.ನಾಗರಾಜು, ಎಪಿಎಂಸಿ ಮಾಜಿ ಸದಸ್ಯ ಎಸ್.ಚನ್ನಕೇಶವ ಇದ್ದರು.

ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಿಳಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತಿದೆ. ಬಿಜೆಪಿ ಹುಟ್ಟು ಹಾಕುತ್ತಿರುವ ಕೋಮು ದ್ವೇಷ ಅಳಿಸಲಾಗುತ್ತಿದೆ.

ಟಿ.ರಘುಮೂರ್ತಿ, ಶಾಸಕ

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…