ಪರಶುರಾಮಪುರ: ಸರ್ಕಾರದ ಸೂಚನೆಯಂತೆ ಜಿಲ್ಲಾದ್ಯಂತ ವಿವಿಧ ಹಳ್ಳಿಗಳಲ್ಲಿ ನರೇಗಾ ಯೋಜನೆಯಡಿ ಅಭಿವೃದ್ಧಿ ಕೆಲಸ ಕೈಗೊಂಡಿದ್ದು, ಕಾರ್ಮಿಕರಿಗೆ ಕೂಲಿ ಕೆಲಸ ನೀಡಲಾಗುತ್ತಿದೆ ಎಂದು ಜಿಪಂ ಸಿಇಒ ಹೊನ್ನಾಂಬ ಹೇಳಿದರು.
ಸಮೀಪದ ಗೋಸಿಕೆರೆ ಬಳಿ ಕೈಗೊಂಡಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿದರು.ತಾಪಂ ಇಒ ಶ್ರೀಧರ ಬಾರಿಕೇರ, ಗ್ರಾಪಂ ಅಧ್ಯಕ್ಷ ಒ.ಬೈಲಪ್ಪ, ತಾಪಂ ಸದಸ್ಯ ಕರಡಪ್ಪ, ಜಿಪಂ ಉಪ ಕಾರ್ಯದರ್ಶಿ ರಂಗಸ್ವಾಮಿ, ಪಿಡಿಒ ಬಿ.ತ್ರಿವೇಣಿ, ಮುಖಂಡರಾದ ಕೃಷ್ಣಮೂರ್ತಿ, ನಾಗರಾಜು, ನರಸಿಂಹಸ್ವಾಮಿ, ಗ್ರಾಪಂ ಸಿಬ್ಬಂದಿ ಸಿ.ಈರಣ್ಣ ಇದ್ದರು.