ಪರಶುರಾಮಪುರ: ಆಹೇರಿಯ ಶ್ರೀ ಬಸವೇಶ್ವರ ಕರ್ಮವೀರ ಕಲಾ ಸಾಹಿತ್ಯ ಸಂಸ್ಕೃತಿ ವೇದಿಕೆ ವಿಜಯಪುರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಸಮಾಜ ಸೇವಕ ಪರಶುರಾಮಪುರದ ಪಿಲ್ಲಹಳ್ಳಿ ಸಿ.ಚಿತ್ರಲಿಂಗಪ್ಪ ಅವರಿಗೆ ಬಸವ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಶಿರಿಶ್ಯಾಡಿ ವಿರಕ್ತಮಠದ ಶ್ರೀ ಮುರುಗೇಂದ್ರ ಶಿವಾಚಾರ್ಯ ಸ್ವಾಮೀಜಿ, ವೇದಿಕೆ ಅಧ್ಯಕ್ಷ ಬಂಡೆಪ್ಪತೇಲಿ ಇತರರಿದ್ದರು.