More

    ಪಾಲಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಿ – ಬಸವಪ್ರಸಾದ ಜೊಲ್ಲೆ

    ಬೋರಗಾಂವ: 21ನೇ ಶತಮಾನದಲ್ಲಿ ಶಿಕ್ಷಣಕ್ಕೆ ಅತ್ಯಂತ ಮಹ ತ್ವವಿದ್ದು, ಎಲ್ಲರೂ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪಾಲಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ತಮ್ಮ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಬಸವಜ್ಯೋತಿ ಯುಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.

    ಸಮೀಪದ ಅಮಲಝರಿ ಗ್ರಾಮದಲ್ಲಿ ಈಚೆಗೆ ಸಚಿವೆ ಶಶಿಕಲಾ ಜೊಲ್ಲೆ ಪ್ರಯತ್ನದಿಂದ ಲೊಕೋಪಯೋಗಿ ಇಲಾಖೆಯಿಂದ ಮಂಜೂರಾದ ಅನುದಾನಡಿ ಎರಡು ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ 22 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಿದ್ದಾರೆ ಎಂದರು.

    ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದು ನರಾಟೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ತಳಸಕರ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯವಂತ ಭಾಟಲೆ, ಶಹರ ಅಧ್ಯಕ್ಷ ಪ್ರಣವ ಮಾನವಿ, ಗ್ರಾಮ ಪಂಚಾಯಿತಿ ಸದಸ್ಯೆ ಸುವರ್ಣಾ ಕುಂಬಾರ, ಸಿದ್ರಾಂ ಪೂಜಾರಿ, ಮೋಹನಶಿತೋಳೆ, ಸಿಂಗಪ್ಪ ಕಟ್ಟಿಕರ, ಮಾರುತಿ ಗಾವಡೆ, ಸತ್ಯಾಪ್ಪ ಗಾವಡೆ, ಲೋಕೋಪಯೊಗಿ ಇಲಾಖೆ ಸಹಾಯಕ ಅಭಿಯಂತ ಬಿ.ಬಿ. ಬೇಡಕಿಹಾಳೆ, ರಿತೇಶ ಪಾಟೀಲ, ಚಂದ್ರಕಾಂತ ಖೋತ, ವಸಂತ ರೇಪೆ ಇತರರು ಉಪಸ್ಥಿತರಿದ್ದರು. ರಾಜು ಭದರಗಡೆ ನಿರೂಪಿಸಿದರು. ಎ.ಎ. ಗದ್ದಾಳೆ ಸ್ವಾಗತಿಸಿದರು. ಮಾರುತಿ ತಳಸಕರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts