ದತ್ತಿಗೋಷ್ಠಿಗಳಿಂದ ಸಂಸತಿ ಉಳಿವು

Parliament survives through charity events

ವಿಜಯಪುರ: ಸನಾತನ ಸಂಸತಿ ಉಳಿಸಿ ಬೆಳೆಸುವುದರೊಂದಿಗೆ ಮುಂದಿನ ಪೀಳಿಗೆಗೆ ತಿಳಿಸಿಕೊಡುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಳ್ಳುವ ದತ್ತಿಗೋಷ್ಠಿಗಳು ಪೂರಕ ಎಂದು ಲಿಂಬೆ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಹೇಳಿದರು.

ನಗರದ ಕಸಾಪ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದತ್ತಿನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು ನುಡಿಯ ಸೇವೆಯನ್ನು ಸಾಹಿತ್ಯ ಪರಿಷತ್​ ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಕಸಾಪದಿಂದ ಕನ್ನಡ ನಾಡಿನ ಕೀರ್ತಿ ಹೆಚ್ಚುತ್ತಿದೆ ಎಂದರು.

ಸಾಹಿತಿ ಶಿಲ್ಪಾ ಭಸ್ಮೆ ಬಸವಾದಿ ಶರಣರು ಮನುಕುಲಕ್ಕೆ ನೀಡಿದ ಕೊಡುಗೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ, ಬಸವಾದಿ ಶರಣರ ಹಲವು ವಚನಗಳ ಸಾರವನ್ನು ಅಥೈಸುವ ಮೂಲಕ ದಯೆ, ಧರ್ಮ, ಆಚಾರ, ನಡೆ&ನುಡಿ, ಕಾಯಕ ಮತ್ತು ದಾಸೋಹ ಸಿದ್ಧಾಂತದ ಕುರಿತು ವಿವರಿಸಿದರು.

ವಿಶ್ರಾಂತ ಪ್ರಾಧ್ಯಾಪಕ ಡಾ. ವಿ.ಎಂ. ಬಾಗಾಯತ ಕಲ್ಯಾಣದ ಅನುಭವ ಮಂಟಪ ವಿಷಯದ ಕುರಿತು ಉಪನ್ಯಾಸ ನೀಡಿ, ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ. ಶೂನ್ಯ ಸಿಂಹಾಸನಾಧೀಶ್ವರ ಅಲ್ಲಮಪ್ರಭುಗಳ ಅಧ್ಯಕ್ಷತೆಯಲ್ಲಿ ಬಸವಕಲ್ಯಾಣದ ಅನುಭವ ಮಂಟಪದಲ್ಲಿದ್ದ ಎಲ್ಲ ಶರಣ&ಶರಣೆಯರಿಗೆ ನೀಡಿದ ಅಭಿವ್ಯಕ್ತಿ ಸ್ವಾತಂತ್ರವನ್ನು ನಾವು ಸ್ಮರಿಸಲೇಬೇಕು ಎಂದರು.

ಮುಖ್ಯ ಅತಿಥಿ ಡಾ.ಎಂ.ಎಸ್​. ಸಿರಗುಪ್ಪಿ, ಸಿದ್ರಾಮಪ್ಪ ತೋಟದ, ಎಸ್​.ಆರ್​. ಜೀರಗಾಳ, ಶಂಕರಗೌಡ ಪಾಟೀಲ, ಪ್ರಕಾಶ ಮಲ್ಲಾರಿ ವೇದಿಕೆಯಲ್ಲಿದ್ದರು. ಸಿಂದಗಿ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂದ ನಿರ್ದೇಶಕರಾಗಿ ಆಯ್ಕೆಯಾದ ಸಂತೋಷ ಅಮರಗೊಂಡ ಅವರನ್ನು ಸನ್ಮಾನಿಸಲಾಯಿತು.

ಡಾ. ಸಂಗಮೇಶ ಮೇತ್ರಿ ಸ್ವಾಗತಿಸಿ ಗೌರವಿಸಿದರು. ಡಾ. ಮಾಧವ ಗುಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪರವೀನ ಶೇಖ ನಿರೂಪಿಸಿದರು. ಸಿದ್ರಾಮಯ್ಯ ಲಕ್ಕುಂಡಿಮಠ ವಂದಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ಅಭಿಷೇಕ ಚಕ್ರವರ್ತಿ, ರಾಜೇಸಾಬ ಶಿವನಗುತ್ತಿ, ಸಿದ್ರಾಮಪ್ಪ ಜಂಗಮಶೆಟ್ಟಿ, ಕೆ.ಎಸ್​. ಹಣಮಾಣಿ, ಎಂ.ಎಸ್​. ಕಾಂಬಳೆ, ಎಫ್​.ಎ. ಹಿರೇ ಕೊಪ್ಪ, ಯುವರಾಜ್​ ಚೋಳಕೆ, ಜಿ.ಎಸ್​. ಬಳ್ಳೂರ, ಎಂ.ಎಸ್​. ಬಗಲಿ, ಅರ್ಜುನ ಶಿರೂರ, ಲತಾ ಗುಂಡಿ, ಗಂಗಮ್ಮ ರಡ್ಡಿ, ಸೂರ್ಯಕಾಂತ ಸಾಲೋಟಗಿ, ಅಹ್ಮದ ವಾಲೀಕಾರ, ಸಿದ್ದು ಮೇಲಿನಮನಿ, ಸಿದ್ದು ಮೇಲಿನಮನಿ, ಆಶಾ ಬಿರಾದಾರ, ವೈ.ಎಚ್​. ಲಂಬು, ಎಂ.ಟಿ. ವಾಲೀಕಾರ, ಶ್ರೀಕಾಂತ ನಾಡಗೌಡ, ಮಂಜುನಾಥ ತೋಟದ, ಶಿವಾಜಿ ಮೋರೆ, ಅನುಷಾ ಹಣಮಾಣಿ, ಲಕ್ಷಿ$್ಮ ಬಿರಾದಾರ, ಸನ್ನಿಧಿ ಬಿರಾದಾರ, ಸಹನಾ ಬಿರಾದಾರ ಮತ್ತಿತರರಿದ್ದರು.

Share This Article

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

ಪ್ರತಿದಿನ ಬೆಳಿಗ್ಗೆ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ನೀವು ಇದನ್ನು ತಿಳಿದುಕೊಳ್ಳಲೇಬೇಕು..Papaya

Papaya: ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಪ್ರಯೋಜನಕಾರಿ ಎನ್ನುವುದು ನಮಗೆ ಗೊತ್ತಿರುವ ವಿಚಾರವಾಗಿದೆ. ಪಪ್ಪಾಯಿ…