More

    ಸಂಘಟನೆ ಮೂಲಕ ಜನರನ್ನು ತಲುಪಿ

    ಚಿಕ್ಕಮಗಳೂರು: ಬಿಜೆಪಿ ಎಲ್ಲ ವರ್ಗದ ಪ್ರಶಿಕ್ಷಣ ಕಾರ್ಯಕರ್ತರಿಗೆ ಭಾರತ ಮಾತೆ ಸೇವೆ ಮಾಡುವ ಅವಕಾಶ ನೀಡಿದ್ದು, ಪಕ್ಷದ ಶಿಸ್ತು-ಸಿದ್ಧಾಂತ ಮೈಗೂಡಿಸಿಕೊಳ್ಳುವ ಜತೆಗೆ ಸಂಘಟನೆ ಮೂಲಕ ಜನರನ್ನು ತಲುಪುವ ಕೆಲಸ ಮಾಡಬೇಕು ಎಂದು ಉಜಿರೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

    ಜಿಲ್ಲಾ ಬಿಜೆಪಿ ಕಚೇರಿ ಸಭಾಂಗಣದಲ್ಲಿ ಶನಿವಾರ ಗ್ರಾಮಾಂತರ ಮಂಡಲ ಪ್ರಶಿಕ್ಷಣ ವರ್ಗದ ಸಮಾರೋಪದಲ್ಲಿ ಮಾತನಾಡಿ, ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ್ಲ ಗ್ರಾಮ, ಗ್ರಾಮಾಂತರ ಪದಾಧಿಕಾರಿಗಳು, ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಪಕ್ಷದ ಬೆಳವಣಿಗೆ ಗಮನಿಸಿ ಎಲ್ಲ್ಲ ವರ್ಗದ ಜನರು ಪಕ್ಷಕ್ಕೆ ಸೇರ್ಪಡೆಗೆ ಮುಂದಾಗುತ್ತಿದ್ದು, ಅಂಥ ಕಾರ್ಯಕರ್ತರನ್ನು ಗುರುತಿಸಿ ಬೆಳೆಸುವ ಕಾರ್ಯ ಕೈಗೊಂಡಾಗ ಸಂಘಟನೆಯಲ್ಲಿ ಮತ್ತಷ್ಟು ಚೈತನ್ಯ ಮೂಡಲಿದೆ ಎಂದರು.

    ನಗರ ಮಂಡಲ ಅಧ್ಯಕ್ಷ ಮಧುಕುಮಾರ್ ರಾಜ್​ಅರಸ್ ಮಾತನಾಡಿ, ಪ್ರತಿಯೊಬ್ಬ ಪ್ರಶಿಕ್ಷಣ ಕಾರ್ಯಕರ್ತರು ಪಕ್ಷಕ್ಕಾಗಿ ಶ್ರಮವಹಿಸಿ ದುಡಿಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಜನಸೇವೆ ಆದ್ಯತೆಯಾಗಿರಿಸಿಕೊಂಡು ಪಕ್ಷದ ಬಲವರ್ಧನೆಗೆ ಮುಂದಾಗಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts