More

    ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಸಂಚಾರಕ್ಕೆ ಅನುಮತಿ

    ಚಿಕ್ಕಮಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್​ಡೌನ್ ನಿಯಮಗಳನ್ನು ಸಡಿಲಿಸಿರುವುದರಿಂದ ಮೇ 4 ರಿಂದ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದರು.

    ಬಸ್ ಆಸನ ಸಾಮರ್ಥ್ಯದ ಶೇ.50 ರಷ್ಟು ಪ್ರಯಾಣಿಕರನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಮಾತ್ರ ಬಸ್​ಗಳು ಸಂಚರಿಸಲಿವೆ. ಆರೆಂಜ್ ಮತ್ತು ರೆಡ್ ಜೋನ್​ಗಳಿಗೆ ಬಸ್​ಗಳು ಸಂಚರಿಸುವ ಬಗ್ಗೆ ಕೆಎಸ್​ಆರ್​ಟಿಸಿ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಜನರು ತುರ್ತು ಸಂದರ್ಭ ಹೊರತುಪಡಿಸಿ ಬೇರೆ ಕೆಲಸಕ್ಕೆ ಹೊರ ಬರುವಂತಿಲ್ಲ. ಮದುವೆ ಸಮಾರಂಭ 50 ಜನ ಹಾಗೂ ಅಂತ್ಯಸಂಸ್ಕಾರಕ್ಕೆ 20 ಜನ ಭಾಗವಹಿಸಬಹುದು. ಸಲೂನ್ ಸೇರಿದಂತೆ ಎಲ್ಲ ಅಂಗಡಿಗಳು ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ತೆರೆಯಲು ಮಾತ್ರ ಅವಕಾಶವಿರುತ್ತದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿದ್ದರೂ ಸಾರ್ವಜನಿಕ ಸ್ಥಳದಲ್ಲಿ ಬಳಸುವಂತಿಲ್ಲ. ಮನೆಯಿಂದ ಹೊರ ಬರುವವರು ಮಾಸ್ಕ್ ಧರಿಸುವುದು ಕಡ್ಡಾಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts