ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆ ಕಾಡಿದ್ದು, ವಿದ್ಯುತ್ ಸಮಸ್ಯೆ ಜತೆಗೆ ಇದೀಗ ರೈಲ್ವೆ ವಲಯದ ಮೇಲೂ ಭಾರೀ ಪರಿಣಾಮ ಬೀರಿದೆ.
ಕಲ್ಲಿದ್ದಲು ಬಿಕ್ಕಟ್ಟು ಹಿನ್ನಲೆಯಲ್ಲಿ ರಾಷ್ಟ್ರದ ಹಲವೆಡೆ ಪ್ಯಾಸೆಂಜರ್ ರೈಲು ಸೇವೆಯನ್ನು ರದ್ದುಗೊಳಿಸಿದೆ. ದೇಶಕ್ಕೆ ಶೇ.70ರಷ್ಟು ವಿದ್ಯುತ್ ಕಲ್ಲಿದ್ದಲಿನಿಂದ ಪೂರೈಕೆಯಾಗುತ್ತಿದೆ. ಇದೀಗ ಕಲ್ಲಿದ್ದಲು ಕೊರತೆಯಿಂದಾಗಿ ಭಾರೀ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಕೈಗಾರಿಕಾ ವಲಯ ಸಾಕಷ್ಟು ಸಮಸ್ಯೆ ಎದುರಿಸಲಿದ್ದು, ಇದು ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಕ್ರೇನ್-ರಷ್ಯಾ ಆಕ್ರಮಣದಿಂದಾಗಿ ಬೆಲೆ ನಿಯಂತ್ರಣಕ್ಕೆ ಹೆಣಗಾಡುತ್ತಿರುವ ಸರ್ಕಾರಕ್ಕೆ ಹಣದುಬ್ಬರದಲ್ಲಿ ಮತ್ತಷ್ಟು ಏರಿಕೆ ಅಪಾಯವು ಇದೆ.
ರೈಲ್ವೆ ವಲಯದ ಮೇಲೂ ಪರಿಣಾಮ ಬೀರಿದ್ದು, ಪ್ರಯಾಣಿಕ ರೈಲುಗಳ ಅವಧಿಯನ್ನು ಕಡಿತಗೊಳಿಸಲಾಗಿದ್ದು, ಕೆಲವೆಡೆ ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆಯ ಕಾರ್ಯನಿರ್ವಾಹಕ ನಿರ್ದೇಶಕ ಗೌರವ್ ಕೃಷ್ಣ ಬನ್ಸಾಲ್ ತಿಳಿಸಿದ್ದಾರೆ.
ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಇಂಧನದ ಕೊರತೆಯಿಂದಾಗಿ ದೂರದವರೆಗೆ ಸರಕು ಬೋಗಿಗಳು ತಲುಪಲು ವಿಳಂಬವಾಗಲಿದೆ ಎಂದು ತಿಳಿಸಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುತ್ತಿದೆ.ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ ಎಂದಿದ್ದಾರೆ.
ಪಿಎಸ್ಐ ಹಗರಣದಲ್ಲಿ ಅಕ್ರಮವೆಸಗಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ: ಪ್ರತಾಪ್ ಸಿಂಹ