ವಿಎಗಳಿಗೆ ಗೌರವ ಸಂಭಾವನೆ ಪಾವತಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ | Utilization of Land Suraksha Scheme Grants

blank

ಬೆಂಗಳೂರು: ಅಕ್ರಮ ನೋಂದಣಿ ತಡೆ, ರೈತರಿಗೆ ನೆರವು ನೀಡಲು ಉದ್ದೇಶಿತ ಪಹಣಿಗಳಿಗೆ ಆಧಾರ್ ಜೋಡಣೆ ಗುರಿ ಸಾಧನೆ ಸಾಧ್ಯವಾಗಿದೆ. ತ್ವರಿತ ಕಾರ್ಯಸಾಧನೆಗೆ ಗ್ರಾಮ ಆಡಳಿತಾಧಿಕಾರಿಗಳು ಮತ್ತು ಗ್ರಾಮ ಸಹಾಯಕರಿಗೆ ಗೌರವ ಸಂಭಾವನೆ ನಿಗದಿಪಡಿಸಿ ಆದೇಶಿಸಲಾಗಿದೆ.

ಮಹತ್ವಾಕಾಂಕ್ಷಿ ಯೋಜನೆಗೆ ಪ್ರಾಮಾಣಿಕವಾಗಿ ಸ್ಪಂದಿಸಿ, ಶ್ರಮಿಸಿದ ಗ್ರಾಮ ಆಡಳಿತ ಅಧಿಕಾರಿ ಮತ್ತು ಗ್ರಾಮ ಸಹಾಯಕರಿಗೆ ಪ್ರತಿ ಒಂದು ಆಧಾರ್ ಜೋಡಣೆಗೆ ತಲಾ ಒಂದು ರೂ. ಸಂಭಾವನೆ ನೀಡಬೇಕೆಂದು ನಿರ್ಧರಿಸಿ, ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.

ವಿ.ವಿ.ಗಳ ಪ್ರಾಮಾಣಿಕ ಕೆಲಸ ಪರಿಣಾಮ ಇದೇ ಜ.31ರವರೆಗೆ 2.22 ಕೋಟಿ ಪಹಣಿಗಳಿಗೆ ಆಧಾರ್ ಸಂಖ್ಯೆ ಜೋಡಣೆ ಸಾಧ್ಯವಾಗಿದೆ. ಈ ಗುರಿ ಸಾಧಿಸುವ ನಿಟ್ಟಿನಲ್ಲಿ ಹಲವು ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ತಮ್ಮ ಜೇಬಿನಿಂದ ಹಣ ಖರ್ಚು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

4.45 ಕೋಟಿ ರೂ. ಬಳಕೆ

ಭೂ ಸುರಕ್ಷಾ ಯೋಜನೆಯಡಿ ಈಗಾಗಲೇ ಪಿಎ್ಎಂಎಸ್ ಮೂಲಕ ಬಿಡುಗಡೆ ಮಾಡಿದ ಅನುದಾನದಲ್ಲಿ 4.45 ಕೋಟಿ ರೂ.ಗಳನ್ನು ಗೌರವ ಸಂಭಾವನೆ ಪಾವತಿಗೆ ಬಳಸಬೇಕು ಎಂದು ನಿರ್ಧರಿಸಿ ಮಾರ್ಗಸೂಚಿ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

ಲಭ್ಯ ಮಾಹಿತಿ ಪ್ರಕಾರ 31-1-2025ರವರೆಗೆ ಆಧಾರ್ ಜೋಡಣೆ ಕಾರ್ಯನಿರ್ವಹಿಸಿದ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರಿಗೆ ಸಂಭಾವನೆ ನಿಗದಿಯಾಗಿದೆ. ಉದಾಹರಣೆಗೆ ಒಂದು ಸಾವಿರ ಆಧಾರ್ ಜೋಡಣೆಗೆ ಎರಡು ಸಾವಿರ ರೂ. ನೀಡಲಾಗುತ್ತಿದೆ. ಈ ಪೈಕಿ ಅಯಾ ಕಂದಾಯ ವೃತ್ತದ ಒಬ್ಬ ಗ್ರಾಮ ಅಡಳಿತ ಅಧಿಕಾರಿ, ಗ್ರಾಮ ಸಹಾಯಕರಿಗೆ ತಲಾ ಒಂದು ಸಾವಿರ ರೂ. ಪಾವತಿಸುವುದು.

ಜೋಡಣೆ ಕಾರ್ಯದ ಬಗ್ಗೆ ತಹಸೀಲ್ದಾರರಿಂದ ಮಾಹಿತಿ ಪಡೆದು ಕಟ್ಟುನಿಟ್ಟಾಗಿ ಪರಿಶೀಲಿಸಿ ಕಾರ್ಯನಿರ್ವಹಿಸಿದ ಅವಧಿಗೆ ತಕ್ಕಂತೆ ಸಂಭಾವನೆ ಪಾವತಿಗೆ ಕ್ರಮ. ಬ್ಯಾಂಕ್ ಖಾತೆಗೆ ಈ ಮೊತ್ತ ಜಮಾ ಮಾಡಿ ಅನುದಾನ ಬಿಡುಗಡೆ ಮತ್ತು ಪಾವತಿ ವಿಷಯದ ಬಗ್ಗೆ ೆ.21ರೊಳಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಕೃಷ್ಣಬೈರೇಗೌಡ ನಿರ್ದೇಶಿಸಿದ್ದಾರೆ.

Share This Article

ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking

Walking : ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆ ಹೆಚ್ಚಾಗಿ ಕಂಡುಬರುತ್ತಿದೆ. ವಯಸ್ಸಿನ ಹೊರತಾಗಿಯೂ, ಚಿಕ್ಕವರಿಂದ ಹಿಡಿದು…

ಚಾಣಕ್ಯನ ಪ್ರಕಾರ ನಿಮಗೆ ಈ 4 ಸಂಗತಿ ಗೊತ್ತಿದ್ದರೆ ಯಾರಿಂದಲೂ ನಿಮ್ಮನ್ನು ಸೋಲಿಸಲು ಸಾಧ್ಯವಿಲ್ಲ! Chanakya Niti

Chanakya Niti : ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

ಪ್ರತಿದಿನ ಬೆಳಿಗ್ಗೆ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ನೀವು ಇದನ್ನು ತಿಳಿದುಕೊಳ್ಳಲೇಬೇಕು..Papaya

Papaya: ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯಕ್ಕೂ ಪ್ರಯೋಜನಕಾರಿ ಎನ್ನುವುದು ನಮಗೆ ಗೊತ್ತಿರುವ ವಿಚಾರವಾಗಿದೆ. ಪಪ್ಪಾಯಿ…