More

    ಲೋಕಾಯುಕ್ತ ಬಲೆಗೆ ಪಿಡಿಒ

    ಕೋಲಾರ: ಲಂಚ ಸ್ವೀಕರಿಸುತ್ತಿದ್ದ ವೇಳೆ ತಾಲೂಕಿನ ಅರೆಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಾನಂದ ಕುಮಾರ್‌, ಲೋಕಾಯುಕ್ತ ಪೊಲೀಸರ ಬಲೆಗೆ ಬುಧವಾರ ಸಿಕ್ಕಿ ಬಿದ್ದಿದ್ದಾರೆ.

    ಅರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕೋಡಿಕಣ್ಣೂರು ಗ್ರಾಮದ ಎಂ.ನಾಗರಾಜು ಎಂಬುವರಿಗೆ ಇ–ಖಾತಾ ಮಾಡಿಕೊಡಲು ಪಿಡಿಒ ಶಿವಾನಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
    ಶಿವಾನಂದ ಬುಧವಾರ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
    ಕಾರ್ಯಾಚರಣೆಯಲ್ಲಿ ಪಿಡಿಒ ಶಿವಾನಂದ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಜಿಲ್ಲಾ ಪೊಲೀಸ್‌ ಅಧೀಕ್ಷಕ ಬಿ.ಕೆ.ಉಮೇಶ್‌ ತಿಳಿಸಿದರು.

    ಇ–ಖಾತಾ ವಿಚಾರವಾಗಿ ನಾಗರಾಜು ಅರ್ಜಿ ಸಲ್ಲಿಸಿದ್ದರು. ಆಗ ಪಿಡಿಒ 15 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾ. 13ರಂದು 5 ಸಾವಿರ ರೂ ನಗದು ಹಾಗೂ ಇನ್ನು 5 ಸಾವಿರವನ್ನು ಫೋನ್‌ ಪೇ ಮೂಲಕ ಪಡೆದುಕೊಂಡಿದ್ದರು. ಇನ್ನುಳಿದ 5 ಸಾವಿರ ರೂ ನೀಡುವಂತೆ ಪದೇಪದೇ ಒತ್ತಾಯಿಸುತ್ತಿದ್ದರು. ಈ ಸಂಬಂಧ ನಾಗರಾಜು ದೂರು ನೀಡಿದ್ದರು. ಬುಧವಾರ ದಾಳಿ ನಡಸಿದ್ದು, ಕಚೇರಿಯಲ್ಲಿ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts