ಬೆಂಗಳೂರು: ತುಮಕೂರು ರಸ್ತೆ ಪೀಣ್ಯ ಎಲಿವೇಟೆಡ್ ಹೈವೇ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ) ಜ.16ರಿಂದ 19 ವರೆಗೆ ಮತ್ತೆ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.
ಪೀಣ್ಯ ಎಲಿವೇಟೆಡ್ ರಸ್ತೆಯಲ್ಲಿ ವಯಾಡಕ್ಟ್ ದುರಸ್ತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿತ್ತು. ಇದೀಗ ವಯಾಡಕ್ಟ್ನ ಸಮಗ್ರತೆಯ ಪರಿಶೀಲನೆಯನ್ನು ನಡೆಸಲು ಲೋಡ್ ಟೆಸ್ಟಿಂಗ್ ಅಗತ್ಯವಿದೆ. ಜ.16ರ ರಾತ್ರಿ 11ರಿಂದ ಜ.19ರ ಬೆಳಗ್ಗೆ 11 ಗಂಟೆ ವರೆಯೂ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಬೇಕೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ನೆಲಮಂಗಲದ ಕಡೆಯಿಂದ ಬೆಂಗಳೂರಿಗೆ ್ಲೈಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಪಕ್ಕದ ಎನ್ಎಚ್-4 ರಸ್ತೆ ಹಾಗೂ ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್ಆರ್ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.
ಸಿಎಂಟಿಐ ಜಂಕ್ಷನ್ನಿಂದ ನೆಲಮಂಗಲ ಕಡೆಗೆ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ್ಲೈಓವರ್ ಪಕ್ಕದ ಎನ್ಎಚ್-4ರಸ್ತೆ ಹಾಗೂ ಸರ್ವಿಸ್ ರಸ್ತೆಯಲ್ಲಿ ಎಸ್ಆರ್ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.