More

    ಯುವಕನ ಬರ್ಬರ ಕೊಲೆ: ಕರೆ ಮಾಡಿ ಕರೆಸಿಕೊಂಡು ಚಾಕುವಿನಿಂದ ಚುಚ್ಚಿದ್ರು, ಹಳ್ಳಕ್ಕೆ ತಳ್ಳಿ ತಲೆ ಮೇಲೆ ಕಲ್ಲು ಹಾಕಿದ್ರು..

    ಮೈಸೂರು: ಯುವಕನೊಬ್ಬನಿಗೆ ಚಾಕುವಿನಿಂದ ಚುಚ್ಚಿದ್ದಲ್ಲದೆ, ಹಳ್ಳಕ್ಕೆ ತಳ್ಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ ಪ್ರಕರಣವೊಂದು ವರದಿಯಾಗಿದೆ. ಮೈಸೂರಿನ ಹೊರವಲಯದ ರಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಹತ್ಯೆ ಮಾಡಲಾಗಿದೆ.

    ಜೆಸಿಬಿ ವಾಹನ ಚಾಲಕನಾಗಿದ್ದ ಅರ್ಜುನ್ (24) ಎಂಬಾತ ಹತ್ಯೆಯಾದ ಯುವಕ. ಈತನಿಗೆ ಫೋನ್ ಮಾಡಿ, ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು, ಬಳಿಕ ಈತನನ್ನು ಅಟ್ಟಾಡಿಸಿ ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾರೆ. ಕೊನೆಗೆ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

    ಇದನ್ನೂ ಓದಿ: ‘ಪದವಿಪೂರ್ವ’ಕ್ಕೀಗ ಅದಿತಿಯೂ ಅತಿಥಿ; ‘ಭಟ್ಟ’ರ ಸಿನಿಮಾದಲ್ಲಿ ಹಲವರಿಗೆ ಅಭಿನಯ ‘ಯೋಗ’

    ತೀವ್ರವಾಗಿ ಗಾಯಗೊಂಡ ಈತನನ್ನು ಸಂಬಂಧಿಕರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: ಸುದ್ದಿಯ ಶೀರ್ಷಿಕೆ ತಿರುಚಿದ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು

    ಮೈಸೂರು ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಅರ್ಜುನ್ ಶವವನ್ನು ಗುರುವಾರ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು.

    ಇದು ‘ಎಣ್ಣೆ-ಏಟು’: ಪಾನಮತ್ತ ಚಾಲಕ, ಕೋಪೋದ್ರಿಕ್ತ ಮಾಲೀಕ; ಮುಂದಾಗಿದ್ದೆಲ್ಲ ವೈರಲ್!

    ಕುಡಿಯಬೇಡ ಎಂದಿದ್ದಕ್ಕೆ ಮನೆ ಬಿಟ್ಟ ಗಂಡ; ಮನನೊಂದು ವಿಷ ಸೇವಿಸಿದ ಪತ್ನಿ-ಪುತ್ರಿ; ಸತಿಯ ಸಾವಿನ ಸುದ್ದಿ ಕೇಳಿ ಪತಿಯೂ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts