ಗ್ಯಾರಂಟಿ ಯೋಜನೆಗಳಿಂದ ಜನರು ಖುಷಿ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ಖುಷಿಯಾಗಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಅಭಿಪ್ರಾಯಪಟ್ಟಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ಕುವೆಂಪುನಗರ ವಾರ್ಡ್‌ನಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ. ಬಡ,ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ, ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆ ಸಂಕಷ್ಟವನ್ನು ಬಗೆಹರಿಸುವ ಕೆಲಸ ಮಾಡಿದೆ. ಕೆಲಸ ಮಾಡಿದ್ದೇವೆ ಶಕ್ತಿ … Continue reading ಗ್ಯಾರಂಟಿ ಯೋಜನೆಗಳಿಂದ ಜನರು ಖುಷಿ: ಸಚಿವ ಕೃಷ್ಣಭೈರೇಗೌಡ