More

    ಭಾರತ ವಿಭಜನೆ ಮಾತುಗಳನ್ನಾಡುವ ಶಾರ್ಜಿಲ್​ರಂತವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು: ಬಿಜೆಪಿ ಶಾಸಕ

    ನವದೆಹಲಿ: ಭಾರತ ವಿಭಜನೆಯ ಮಾತುಗಳನ್ನಾಡುವ ಶಾರ್ಜಿಲ್​ ಇಮಾಮ್​ರಂತವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಬಿಜೆಪಿ ಶಾಸಕ ಸಂಗೀತ್​ ಸೋಮ್​ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

    ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಹೀನ್​ ಬಾಘ್​ನಲ್ಲಿ ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಮಹಿಳೆಯರು ಯಾವುದೇ ಕೆಲಸದಲ್ಲಿಲ್ಲ. ಹೀಗಾಗಿ ಇಂತಹ ಪ್ರತಿಭಟನೆಗೆ ಹಣವನ್ನು ನೀಡುತ್ತಿರುವ ಮೂಲ ಯಾವುದು ಎಂಬುದನ್ನು ತನಿಖೆ ಮೂಲಕ ಪತ್ತೆ ಹಚ್ಚಬೇಕಿದೆ. ಹಾಗೇ ಶಾರ್ಜಿಲ್​ ಇಮಾಮ್​ರಂತೆ ದೇಶ ವಿಭಜನೆ ಮಾತಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕಾಗಿದೆ ಎಂದರು.

    ಅಂದಹಾಗೆ ಇಮಾಮ್​, ಜೆಎನ್​ಯು ಮಾಜಿ ವಿದ್ಯಾರ್ಥಿ. ಪ್ರತಿಭಟನಾ ವೇಳೆ ಅಸ್ಸಾಂ ಅನ್ನು ಭಾರತದಿಂದ ವಿಭಜಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಪೊಲೀಸ್​ ಗಮನಕ್ಕೆ ಬಂದಿತ್ತು. ತಲೆಮರೆಸಿಕೊಂಡಿದ್ದ ಇಮಾಮ್​ನನ್ನು ದೆಹಲಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದರು.

    ಗುರುವಾರವಷ್ಟೇ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಜಾಮಿಯಾ ಏರಿಯಾದಲ್ಲಿ ಪ್ರತಿಭಟನೆ ನಡೆಸುವಾಗ ವ್ಯಕ್ತಿಯೊಬ್ಬ ಪೊಲೀಸರ ಎದುರೇ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದಾದ ಒಂದು ದಿನದ ಬೆನ್ನಲ್ಲೇ ಶಾಸಕ ಸೋಮ್​ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗುರಿಯಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್​ ಪ್ರಚೋದನೆಯಿಂದಲೇ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ ಎಂದು ಈಗಾಗಲೇ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts