More

    ಆನೆಗೇ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಕೊನೆಯುಸಿರೆಳೆದ ಆನೆ

    ಊಟಿ: ಮನುಷ್ಯರ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್​ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

    ಊಟಿಯ ಕಾಡು ಪ್ರದೇಶದ 40 ವರ್ಷದ ಆನೆಯೊಂದು ಜನವರಿ 19ರಂದು ಎಸ್ಟೇಟ್​ ಒಂದರ ಒಳಗೆ ಬರಲು ಪ್ರಯತ್ನಿಸಿದೆ. ಈ ಸಮಯದಲ್ಲಿ ಎಸ್ಟೇಟ್​ ಕಾವಲು ಕಾಯುತ್ತಿದ್ದ ರೈಮಾನ್ ಮತ್ತು ಪ್ರಶಾಂತ್ ಒಂದು ಟೈಯರ್​ಗೆ ಬೆಂಕಿ ಹಚ್ಚಿ ಅದನ್ನು ಆನೆಯ ಮೇಲೆ ಎಸೆದಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದ ಟೈಯರ್​ನ್ನು ಹೊತ್ತ ಆನೆ ನೋವಿನಿಂದ ಕೂಗಿಕೊಳ್ಳುತ್ತ ಸ್ವಲ್ಪ ದೂರ ಹೋಗಿದೆ. ಆನೆಯ ಕಿವಿ ಮತ್ತು ಹಿಂಭಾಗದಲ್ಲಿ ಸುಟ್ಟ ಗಾಯಗಳಾಗಿವೆ.

    ಆನೆಗೆ ಬೆಂಕಿ ಹಚ್ಚಿದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ:

    https://fb.watch/3aKz1hqppw/

    ಅಸ್ವಸ್ಥವಾಗಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಕಂಡಿದ್ದು, ವೈದ್ಯಕೀಯ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಸುಟ್ಟ ಗಾಯದಿಂದ ಸಾಕಷ್ಟು ನೋವುಂಡಿದ್ದ ಆನೆ ಕೊನೆಯುಸಿರೆಳೆದಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಶಾಂತ್​ ಮತ್ತು ರೈಮಾನ್​ನನ್ನು ಬಂಧಿಸಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts