ಬೆಂಗಳೂರು: ಸುಡಾನ್ ದೇಶದಲ್ಲಿ ನಡೆಯುತ್ತಿದ್ದ ಅಂತರ್ಯುದ್ಧದಲ್ಲಿ ಸಿಲುಕಿದ್ದವರನ್ನು ಭಾರತಕ್ಕೆ ಆಪರೇಷನ್ ಕಾವೇರಿಯ ಅಡಿಯಲ್ಲಿ ರಕ್ಷಿಸಿ ಕರೆತೆರಲಾಗಿದೆ. ಆದರೆ ಅಲ್ಲಿಂದ ಬಂದವರಲ್ಲಿ ಹಳದಿ ಜ್ವರಕ್ಕೆ ಲಸಿಕೆ ಪಡೆದ ಪ್ರಮಾಣಪತ್ರ ಇಲ್ಲದಿದ್ದರಿಂದ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಸುಡಾನ್ನಿಂದ ಬಂದವರಿಂದಾಗಿ ಹಳದಿ ಜ್ವರ ರಾಜಧಾನಿಗೆ ಹರಡುವ ಭೀತಿ ಇತ್ತು. ಯಲ್ಲೋ ಫೀವರ್ಗೆ ವ್ಯಾಕ್ಸಿನ್ ಪಡೆಯದೇ ಅಂತರ್ಯುದ್ಧದಲ್ಲಿ ಸಿಲುಕಿದ್ದವರು ರಾಜಧಾನಿಗೆ ಪ್ರವೇಶಿಸಿದ್ದರಿಂದ ಈ ಭೀತಿ ಎದುರಾಗಿದೆ.ಒಟ್ಟು ಲಸಿಕೆ ಪಡೆಯದೇ ಬಂದವರು 45 ಮಂದಿ ಇದ್ದು ಅವರನ್ನು 4 ದಿನಗಳ ಕಾಲ ಆರೋಗ್ಯ ಇಲಾಖೆ ಕ್ವಾರಂಟೈನ್ಗೆ ಒಳಪಡಿಸಿದೆ.
ದಕ್ಷಿಣ ಆಫ್ರಿಕಾ, ದಕ್ಷಿಣಾ ಅಮೆರಿಕಾ, ಉಗಾಂಡ, ನೈಜಿರಿಯಾ, ಕೀನ್ಯಾ ಸೇರಿ ಕೆಲ ಭಾಗಗಳಲ್ಲಿ ಹಳದಿ ಜ್ವರ ಹರಡಿದ್ದು ಇದೊಂದು ಭೀಕರ ಕಾಯಿಲೆಯಾಗಿದೆ. ಆಪರೇಷನ್ ಕಾವೇರಿ ಕಾರ್ಯಚರಣೆ ಅಡಿ ನಿನ್ನೆ ರಾಜಧಾನಿಗೆ 362 ಮಂದಿ ಆಗಮಿಸಿದ್ದಾರೆ. ಈ ಪೈಕಿ 45 ಮಂದಿ ಬಳಿ ಹಳದಿ ಜ್ವರದ ಲಸಿಕೆ ಪ್ರಮಾಣ ಪತ್ರ ಇಲ್ಲ. ಸದ್ಯ ಅಷ್ಟೂ ಮಂದಿಯನ್ನು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.