ಪಶ್ಚಿಮ ಬಂಗಾಳ: ಭ್ರಷ್ಟ ರಾಜಕಾರಣಿಗಳು ದಾಳಿಗೆ ಒಳಗಾಗಿ ಬಂಧನಕ್ಕೆ ಒಳಗಾಗುವುದು, ವಿಚಾರಣೆಗೆ ಈಡಾಗುವುದು ಮುಂತಾದವೆಲ್ಲ ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ಭ್ರಷ್ಟ ರಾಜಕಾರಣಿಯೊಬ್ಬ ಸಾರ್ವಜನಿಕರಿಂದ ಬಹಿರಂಗವಾಗಿ ತೀವ್ರ ಮುಜುಗರಕ್ಕೊಳಗಾದ ಪ್ರಸಂಗವೊಂದು ನಡೆದಿದೆ.
ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಬಿರ್ಭುಮ್ ಜಿಲ್ಲಾಧ್ಯಕ್ಷ ಅನುಬ್ರತ ಮೊಂಡಲ್ ಮುಜುಗರಕ್ಕೆ ಒಳಗಾದವರು. ಮೇವು ಹಗರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಈತನನ್ನು ಇಂದು ವಿಚಾರಣೆಗಾಗಿ ಅಸಾನ್ಸಲ್ ಎಂಬಲ್ಲಿನ ಸಿಬಿಐ ನ್ಯಾಯಾಲಯಕ್ಕೆ ಕರೆ ತರಲಾಗಿತ್ತು.
ಈ ಸಂದರ್ಭದಲ್ಲಿ ಮೊಂಡಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಶೂ ತೋರಿ ‘ಕಳ್ಳ ಕಳ್ಳ’ ಎಂದು ಕೂಗಿದ್ದಾರೆ. ಪೊಲೀಸರ ವಶದಲ್ಲಿದ್ದ ಮೊಂಡಲ್ ಸಾರ್ವಜನಿಕರು ಬಹಿರಂಗವಾಗಿ ವ್ಯಕ್ತಪಡಿಸಿದ ಆಕ್ರೋಶದಿಂದ ತೀವ್ರ ಮುಜುಗರಕ್ಕೆ ಒಳಗಾಗಿದ್ದು ಕಂಡುಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಂಡಲ್ನನ್ನು ಸಿಬಿಐ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.
ಊರಲ್ಲಿ ಸ್ಮಶಾನ ಇಲ್ಲದ್ದರಿಂದ ಗ್ರಾಮ ಪಂಚಾಯತ್ ಆವರಣದಲ್ಲೇ ಶವಸಂಸ್ಕಾರಕ್ಕೆ ಸಜ್ಜಾದ ಗ್ರಾಮಸ್ಥರು!
Fact Check: ರಾಷ್ಟ್ರಧ್ವಜ ಖರೀದಿಸದಿದ್ದರೆ ರೇಷನ್ ಕೊಡಲ್ವಾ?; ಇಲ್ಲಿದೆ ಸತ್ಯಾಂಶ..