ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳುವಂತೆ ಪ್ರತಿಪಕ್ಷಗಳಿಗೆ ಪ್ರಧಾನಿ ಮೋದಿ ಸಲಹೆ

blank

ನವದೆಹಲಿ: ಸಂಸತ್ತಿನಲ್ಲಿ ಮೋದಿ 3.0 ಸರ್ಕಾರದ ಮೊದಲ ಅಧಿವೇಶನವು ಇಂದಿನಿಂದ (ಜೂನ್​​​ 24) ಆರಂಭವಾಗಿದೆ. ದೇಶದ ಜನತೆ ಜವಾಬ್ದಾರಿಯುತ ಪ್ರತಿಪಕ್ಷವನ್ನು ಬಯಸುತ್ತಾರೆಯೇ ಹೊರತು ತಂತ್ರ, ನಾಟಕ, ಘೋಷಣೆಗಳಲ್ಲ ಎಂದು 18ನೇ ಲೋಕಸಭೆಯ ಸಂಸತ್ ಅಧಿವೇಶನದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನು ಓದಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮತ ಚಲಾಯಿಸಿರುವುದು ಅದೊಂದೆ ಏಕೈಕ ಸಮುದಾಯ; ಸಿಎಂ ಹಿಮಂತ ಬಿಸ್ವಾ ಶರ್ಮಾ

ಅಧಿವೇಶನದ ಕಲಾಪಕ್ಕೆ ಅಡ್ಡಿಯಾಗದಂತೆ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ಕಾಂಗ್ರೆಸ್​ ಸೇರಿದಂತೆ ಪ್ರತಿಪಕ್ಷಗಳಿಗೆ ಕರೆ ನೀಡಿದರು. ದೇಶದ ಜನರು ಸಂಸತ್ತಿನ ಸದಸ್ಯರಿಂದ ಚರ್ಚೆ ಮತ್ತು ಪರಿಶ್ರಮವನ್ನು ನಿರೀಕ್ಷಿಸುತ್ತಾರೆಯೇ ಹೊರತು ಗೊಂದಲ ಮತ್ತು ಅಶಾಂತಿಯನಲ್ಲ. ಸಂಸದರಿಂದ ಕೆಲಸಗಳನ್ನು ಬಯಸುತ್ತಾರೆಯೇ ಹೊರತು ಘೋಷಣೆಗಳನ್ನಲ್ಲ. ಸಂಸದರು ಸಾಮಾನ್ಯ ಜನರ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಭಾರತಕ್ಕೆ ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ. ಜನರಿಗೆ ಘೋಷಣೆಗಳು ಬೇಡ, ಚರ್ಚೆ ಬೇಕು, ಕಠಿಣ ಪರಿಶ್ರಮ ಬೇಕು, ಸಂಸತ್ತಿನಲ್ಲಿ ಅಶಾಂತಿ ಬೇಡ. ಪ್ರತಿಪಕ್ಷಗಳಿಂದ ಜನರು ಒಳ್ಳೆಯ ಹೆಜ್ಜೆಗಳನ್ನು ನಿರೀಕ್ಷಿಸುತ್ತಾರೆ. ಇದು ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ, ಆದರೆ ಅದು ತನ್ನ ಪಾತ್ರವನ್ನು ನಿರ್ವಹಿಸಿ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡುತ್ತದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

2024ರ ಲೋಕಸಭೆ ಚುನಾವಣೆಯ ನಂತರ ನಡೆದ ಮೊದಲ ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತ ಸಂಸದರು ಪ್ರಮಾಣವಚನ ಸ್ವೀಕರಿಸಿದರು. ಇದರ ನಂತರ ಜೂನ್ 26ರಂದು ಲೋಕಸಭೆಯ ಸ್ಪೀಕರ್ ಆಯ್ಕೆ ಮತ್ತು ಜೂನ್ 27ರಂದು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅಧ್ಯಕ್ಷ ದ್ರೌಪದಿ ಮುರ್ಮು ಅವರ ಭಾಷಣ ನಡೆಯಲಿದೆ.(ಏಜೆನ್ಸೀಸ್​​)

ಬಾಲಿವುಡ್ ​ಹೆಸರಾಂತ ನಟನ ಸಿನಿಮಾದಲ್ಲಿ ಸೌತ್​ ಬ್ಯೂಟಿ ಸಮಂತಾ​​​?

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…