ಹಿಂದಿನ ಚುನಾವಣೆ ನಂತರ ಪಕ್ಷ ಬದಲಾಯಿಸಿದ್ದ ಬಹುತೇಕರಿಗೆ ಹಿನ್ನಡೆ!

blank

ಬೆಂಗಳೂರು: 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.

ಈ ಬಾರಿಯ ಚುನಾವಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿ ಸರ್ಕಾರ ರಚನೆ ಮಾಡಿದ್ದ ಬಹುತೇಕ ನಾಯಕರು ಹಿನ್ನಡೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಪ್ರಮುಖರಾದ ಎಸ್​ಟಿ ಸೋಮಶೇಖರ್, ಸುಧಾಕರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್ ಮುಂತಾದವರು ಹಿನ್ನಡೆ ಅನುಭವಿಸುತ್ತಿದ್ದಾರೆ.

ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.

73.19 ದಾಖಲೆ ಮತದಾನ: ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…