ಶಿವಮೊಗ್ಗ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿವಮೊಗ್ಗದ ಲಾಡ್ಜ್ವೊಂದರಲ್ಲಿ ಬ್ಲೇಡ್ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ರಾಜಾಜಿನಗರದ ಎಚ್.ಕೆ.ನರೇಂದ್ರಬಾಬು (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಬುಧವಾರ ಬೆಳಗಿನ ಜಾವ ನೆಹರೂ ರಸ್ತೆಯ ಲಾಡ್ಜ್ಗೆ ಬಂದಿದ್ದು ರೂಮ್ ಪಡೆದುಕೊಂಡಿದ್ದರು. ಮಧ್ಯಾಹ್ನ ಹೊರಗಡೆ ತೆರಳಿ ಊಟ ಪಾರ್ಸೆಲ್ ತಂದಿದ್ದಾರೆ. ಬಳಿಕ ಊಟ ಮಾಡಿ ವಿಶ್ರಾಂತಿಗೆ ಮೊರೆ ಹೋಗಿದ್ದು, ನಂತರ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ.
ಶನಿವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಬಾಗಿಲು ತಟ್ಟಿದ್ದರೂ ಪ್ರತಿಕ್ರಿಯೆ ನೀಡದ ಕಾರಣ ಅನುಮಾನಗೊಂಡಿದ್ದಾರೆ. ಜತೆಗೆ ಕೊಠಡಿಯಿಂದ ವಾಸನೆ ಬರುತ್ತಿರುವುದನ್ನು ಅರಿತ ಸಿಬ್ಬಂದಿ ತಕ್ಷಣವೇ ಹೋಟೆಲ್ ಮಾಲೀಕರ ಗಮನಕ್ಕೆ ವಿಷಯ ಮುಟ್ಟಿಸಿದ್ದಾರೆ.
ಸಿಬ್ಬಂದಿಯಿಂದ ಮಾಹಿತಿ ಪಡೆದ ಮಾಲೀಕರು ಕೋಟೆ ಠಾಣೆಗೆ ಕರೆ ಮಾಡಿ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಕೊಠಡಿ ತೆರೆದು ನೋಡಿದಾಗ ನರೇಂದ್ರಬಾಬು ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದರು. ತಕ್ಷಣವೇ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮೇಲ್ನೋಟಕ್ಕೆ ಆರ್ಥಿಕ ಮುಗ್ಗಟ್ಟಿನ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ನಿರಾಕರಿಸುವುದು ಸಂವಿಧಾನವನ್ನು ನಿರಾಕರಿಸಿದಂತೆ: ನಟಿ ಕಂಗನಾ ರಣಾವತ್
ಎಚ್ಡಿಕೆ-ಸಿಪಿವೈ ಮೇಲಾಟ; ತಹಶೀಲ್ದಾರ್ಗಳಿಗೆ ಪೀಕಲಾಟ, ಚನ್ನಪಟ್ಟಣ ತಾಲೂಕು ಕಚೇರಿಯಲ್ಲಿ ವರ್ಗಾವಣೆ ಹುಡುಗಾಟ..