More

    ವೈಯಕ್ತಿಕ ದ್ವೇಷ, ಹಣಕಾಸು ವಿಚಾರಕ್ಕೆ ಹತ್ಯೆ

    ಉಡುಪಿ: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡಹಗಲೇ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಮುಖ್ಯ ಆರೋಪಿ ಮಂಗಳೂರು ಜೋಕಟ್ಟೆ, ತೋಕೂರು ನಿವಾಸಿ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೋಡಿಕೆರೆ (37) ಮತ್ತು ಕಾಟಿಪಳ್ಳ, ಕೃಷ್ಣಾಪುರ ನಿವಾಸಿ ಚಿತ್ತರಂಜನ್ ಪೂಜಾರಿ(27), ಬಂಟ್ವಾಳದ ರೊಟ್ಟಿಗುಡ್ಡೆ ಹೌಸ್ ಚೇತು ಪಡೀಲ್(32), ಸಂಗಬೆಟ್ಟು ನಿವಾಸಿ ರಮೇಶ್ ಪೂಜಾರಿ(38) ಹಾಗೂ ಕಾಟಿಪಳ್ಳ ಬಾಜಾವ ನಿವಾಸಿ ದೀಕ್ಷಿತ್ ಶೆಟ್ಟಿ(29) ಬಂಧಿತರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ವಿಷ್ಣುವರ್ಧನ್ ಮಾಹಿತಿ ನೀಡಿದರು.

    ವೈಯಕ್ತಿಕ ದ್ವೇಷ, ಹಣಕಾಸು ವಿಚಾರಕ್ಕೆ ಸಂಬಂಧಿಸಿ ಹತ್ಯೆ ಮಾಡಲಾಗಿದೆ ಎಂಬುದು ಪ್ರಾಥಮಿಕ ಹಂತದ ತನಿಖೆಯಲ್ಲಿ ತಿಳಿದುಬಂದಿದೆ, ಇನ್ನೂ ತನಿಖೆ ಮುಂದುವರಿದಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

    ಹತ್ಯೆ ಬಳಿಕ ಪರಾರಿಯಾಗಿದ್ದ ಆರೋಪಿಗಳನ್ನು ಶನಿವಾರ ಬೆಳಗ್ಗೆ 6 ಗಂಟೆಗೆ ಕಾರ್ಕಳ ತಾಲೂಕು ಎಸ್‌ಕೆ ಬಾರ್ಡರ್‌ನಲ್ಲಿ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಬ್ರಹ್ಮಾವರ ಪಿಎಸ್‌ಐ ನೇತೃತ್ವದ ತಂಡ ಬಂಧಿಸಿದೆ. ಆರೋಪಿಗಳು ಪರಾರಿಯಾಗಲು ಮತ್ತು ಕೃತ್ಯಕ್ಕೆ ಬಳಸಿದ್ದ ಮೂರು ಕಾರುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.

    ಎಎಸ್‌ಪಿ ಕುಮಾರಚಂದ್ರ, ಡಿವೈಎಸ್‌ಪಿ ಜೈ ಶಂಕರ್, ವೃತ್ತ ನಿರೀಕ್ಷಕರಾದ ಮಂಜುನಾಥ್, ಮಹೇಶ್ ಪ್ರಸಾದ್, ಅನಂತ ಪದ್ಮನಾಭ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts