More

    ಭಾರತದಲ್ಲಿ ಮುಂದಿನ 5 ವರ್ಷದಲ್ಲಿ ಪೆಟ್ರೋಲ್​​ ಬಳಕೆಯೇ ಇರುವುದಿಲ್ಲ: ಸಚಿವ ನಿತಿನ್​ ಗಡ್ಕರಿ

    ನವದೆಹಲಿ: ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್​ ಬಳಕೆಯೇ ಇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತ ಬರುವ ವರ್ಷಗಳಲ್ಲಿ ಪೆಟ್ರೋಲ್​ ಬಳಕೆಯ ಅನಿವಾರ್ಯತೆ ಇರುವುದಿಲ್ಲ ಎಂದು ವಿಶ್ಲೇಷಿಸಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಕೂಡ ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್​ ಅನಿವಾರ್ಯತೆ ಇರುವುದಿಲ್ಲ ಎಂದಿದ್ದಾರೆ.

    ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗೌರವ ಡಾಕ್ಟರೇಟ್​ ಸ್ವೀಕರಿಸಿ ಮಾತನಾಡಿರುವ ಅವರು, ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು ಎಂದು ಹೇಳಿದ್ದಾರೆ.

    ಮುಂದಿನ ಐದು ವರ್ಷದಲ್ಲಿ ಪೆಟ್ರೋಲ್​ ಖಾಲಿಯಾಗಬಹುದು, ಇದರಿಂದಾಗಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಭವಿಷ್ಯ ನುಡಿದಿದ್ದಾರೆ. (ಏಜೆನ್ಸೀಸ್​)

    ಸದ್ಯದಲ್ಲೇ ಖಾದ್ಯ ತೈಲ ದರ ಇಳಿಕೆ: ಉತ್ಪಾದಕರಿಗೆ ಕೇಂದ್ರ ಸೂಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts