More

    ಮಿಸ್ಟರ್ ಡಿಕೆಶಿ, ನೀವು ಜಾಮೀನಿನ ಮೇಲೆ ಹೊರಗಿದ್ದೀರಿ ಎಂಬುದನ್ನ ಅರಿತುಕೊಳ್ಳಿ; ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ‘ಮಿಸ್ಟರ್ ಡಿ.ಕೆ. ಶಿವಕುಮಾರ್​, ನೀವು ಭ್ರಷ್ಟಾಚಾರದ ಆರೋಪದಡಿ ಬೇಲ್ ಮೇಲೆ ಹೊರಗಿದ್ದೀರಿ ಅನ್ನೋದನ್ನ ಅರಿತುಕೊಳ್ಳಿ. ಒಬ್ಬ ದಕ್ಷ ಐಪಿಎಸ್​ ಅಧಿಕಾರಿಗೆ “ಮಿಸ್ಟರ್ ಕಮಿಷನರ್” ಎಂದು ಅವಾಜ್ ಹಾಕುವುದು ಎಷ್ಟರ ಮಟ್ಟಿಗೆ ಸರಿ? ಏನ್ ಮಾಡ್ತೀರಾ ನೀವು, ಇದೆಲ್ಲ ದೇಶದಲ್ಲಿ ನಡೆಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಸಿದ್ದಾರೆ.

    ಡಿಜೆ ಹಳ್ಳಿ ಪ್ರಕರಣಕ್ಕೂ ಫೋನ್​ ಟ್ಯಾಪಿಂಗ್​ಗೂ ಸಂಬಂಧವಿಲ್ಲ. ಬಿಬಿಎಂಪಿ ಚುನಾವಣೆ ಬರುತ್ತಿದೆ. ಹೀಗಾಗಿ ಇಲ್ಲಿನ ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವುದು ಸರಿಯಲ್ಲ ಎಂದ ಪ್ರಹ್ಲಾದ್​ ಜೋಶಿ, ಡಿ.ಕೆ.ಶಿವಕುಮಾರ್​ ಅವರು ಸಮಾಜದ ಸ್ವಾಸ್ಥ್ಯವನ್ನ ಹಾಳು ಮಾಡುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಟೀಕಿಸಿದರು. ಗೂಂಡಾವರ್ತನೆ ಹಾಗೂ ರಾಜಕೀಯ ಕುತಂತ್ರದಿಂದ ದೇಶಕ್ಕೆ ಸಾಕಷ್ಟು ನಷ್ಟವಾಗಿದೆ. ಇದನ್ನು ಅರಿಯಬೇಕು ಎಂದರು.

    ಇದನ್ನೂ ಓದಿರಿ ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

    ‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಆರೋಪಿಸಿದ್ದರು. ಈ ಮಾತಿಗೆ ಅವರ ಸಹೋದರ ಡಿ.ಕೆ. ಸುರೇಶ್​ ಕೂಡ ಧ್ವನಿಗೂಡಿಸಿದ್ದು, ಫೋನ್​ ಟ್ಯಾಪಿಂಗ್​ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಎಚ್ಚರಿಸಿದ್ದಾರೆ.

    ಫೋನ್​ ಟ್ಯಾಪಿಂಗ್​ ಆಗ್ತಿರೋದು ಸತ್ಯ, ಕೇಂದ್ರಕ್ಕೆ ಪತ್ರ ಬರೆಯುವೆ; ಸಂಸದ ಡಿ.ಕೆ.ಸುರೇಶ್

    video/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts