ಹುಬ್ಬಳ್ಳಿ: ‘ಮಿಸ್ಟರ್ ಡಿ.ಕೆ. ಶಿವಕುಮಾರ್, ನೀವು ಭ್ರಷ್ಟಾಚಾರದ ಆರೋಪದಡಿ ಬೇಲ್ ಮೇಲೆ ಹೊರಗಿದ್ದೀರಿ ಅನ್ನೋದನ್ನ ಅರಿತುಕೊಳ್ಳಿ. ಒಬ್ಬ ದಕ್ಷ ಐಪಿಎಸ್ ಅಧಿಕಾರಿಗೆ “ಮಿಸ್ಟರ್ ಕಮಿಷನರ್” ಎಂದು ಅವಾಜ್ ಹಾಕುವುದು ಎಷ್ಟರ ಮಟ್ಟಿಗೆ ಸರಿ? ಏನ್ ಮಾಡ್ತೀರಾ ನೀವು, ಇದೆಲ್ಲ ದೇಶದಲ್ಲಿ ನಡೆಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಸಿದ್ದಾರೆ.
ಡಿಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್ಗೂ ಸಂಬಂಧವಿಲ್ಲ. ಬಿಬಿಎಂಪಿ ಚುನಾವಣೆ ಬರುತ್ತಿದೆ. ಹೀಗಾಗಿ ಇಲ್ಲಿನ ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿರುವುದು ಸರಿಯಲ್ಲ ಎಂದ ಪ್ರಹ್ಲಾದ್ ಜೋಶಿ, ಡಿ.ಕೆ.ಶಿವಕುಮಾರ್ ಅವರು ಸಮಾಜದ ಸ್ವಾಸ್ಥ್ಯವನ್ನ ಹಾಳು ಮಾಡುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಟೀಕಿಸಿದರು. ಗೂಂಡಾವರ್ತನೆ ಹಾಗೂ ರಾಜಕೀಯ ಕುತಂತ್ರದಿಂದ ದೇಶಕ್ಕೆ ಸಾಕಷ್ಟು ನಷ್ಟವಾಗಿದೆ. ಇದನ್ನು ಅರಿಯಬೇಕು ಎಂದರು.
ಇದನ್ನೂ ಓದಿರಿ ಕಾಂಗ್ರೆಸ್ ವಿರುದ್ಧ ಅಖಂಡ ಶ್ರೀನಿವಾಸ್ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!
‘ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದರು. ಈ ಮಾತಿಗೆ ಅವರ ಸಹೋದರ ಡಿ.ಕೆ. ಸುರೇಶ್ ಕೂಡ ಧ್ವನಿಗೂಡಿಸಿದ್ದು, ಫೋನ್ ಟ್ಯಾಪಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಎಚ್ಚರಿಸಿದ್ದಾರೆ.
ಫೋನ್ ಟ್ಯಾಪಿಂಗ್ ಆಗ್ತಿರೋದು ಸತ್ಯ, ಕೇಂದ್ರಕ್ಕೆ ಪತ್ರ ಬರೆಯುವೆ; ಸಂಸದ ಡಿ.ಕೆ.ಸುರೇಶ್
video/ ಗರಿಬಿಚ್ಚಿ ಪ್ರಧಾನಿ ಮೋದಿ ಜತೆ ಹೆಜ್ಜೆ ಹಾಕಿದ ನವಿಲು… ಇದು ‘ನಮೋ’ ಅಮೂಲ್ಯ ಕ್ಷಣಗಳು!