ಅಕ್ಷರದ ಜ್ಞಾನ ಬಿತ್ತಿದ ಫುಲೆ

blank

ಮುಂಡರಗಿ: ಕೇವಲ ಮಗುವಿಗೆ ಮಾತ್ರ ಅಕ್ಷರ ಕಲಿಸದೆ, ಸಮಾಜಕ್ಕೆ ಅಕ್ಷರ ಜ್ಞಾನ ಬಿತ್ತಿದ ಏಕೈಕ ಮಹಿಳೆ ಸಾವಿತ್ರಿಬಾಯಿ ಫುಲೆ ಎಂದು ಪ್ರಾಚಾರ್ಯ ಎಸ್.ಕೆ. ಚುರ್ಚಿಹಾಳಮಠ ಹೇಳಿದರು.

ಪಟ್ಟಣದ ಪ್ರಿಯದರ್ಶಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಣಿವರಿಯದ ಅವರ ಶ್ರಮವನ್ನು ಗಮನಿಸಿದ ಬ್ರಿಟಿಷ್ ಸರ್ಕಾರ ಭಾರತದ ಮೊದಲ ಮಹಿಳಾ ಶಿಕ್ಷಕಿ ಎಂದು ಸನ್ಮಾನಿಸಿದ್ದು ಹೆಮ್ಮೆ ವಿಷಯ ಎಂದರು.

ಉಪನ್ಯಾಸಕಿ ಶೈಲಜಾ ಕಲ್ಮಠ ಮಾತನಾಡಿ, ಇಂದಿನ ಹೆಣ್ಣು ಮಕ್ಕಳಿಗೆ ಸಾವಿತ್ರಿಬಾಯಿ ಫುಲೆ ಅವರ ಸಾಧನೆಗಳೇ ಮಾದರಿ. ತುಳಿಯುವ ಜನರು ನಡುವೆ ನಾವು ಹೇಗೆ ಬೆಳೆಯಬೇಕು ಎನ್ನುವುದಕ್ಕೆ ಸಾವಿತ್ರಿಬಾಯಿ ಫುಲೆ ಅವರು ನಮಗೆಲ್ಲ ಆದರ್ಶರಾಗಿದ್ದಾರೆ ಎಂದರು.

ಉಪನ್ಯಾಸಕ ವಿನಯ ಗುಜ್ಜಟ್ಟಿ ಮಾತನಾಡಿದರು. ಉಪನ್ಯಾಸಕರಾದ ಬಿ.ಡಿ. ಉಮಚಗಿ, ಜೀವಣ್ಣವರ, ಶ್ರುತಿ ಅಂಗಡಿ, ಪರಿಮಳ ಅಳಗವಾಡಿ, ಮಲ್ಲೇಶ, ವೀರೇಶ ಕಾಗನೂರ ಇದ್ದರು. ವಿದ್ಯಾರ್ಥಿಗಳಾದ ಹೆಬ್ಬಾಳ ಶೋಭಾ ಪ್ರಾರ್ಥಿಸಿದರು. ಅನಿತಾ ನಿರೂಪಿಸಿದರು. ಭೀಮರಡ್ಡಿ ಸ್ವಾಗತಿಸಿದರು. ಶ್ರೀಲಕ್ಷ್ಮೀ ವಂದಿಸಿದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…