ತಿರುವನಂತಪುರಂ; ಸತತ ಎರಡನೇ ಬಾರಿಗೆ ಕೇರಳ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಆರೀಪ್ ಮಹಮ್ಮದ್ ಖಾನ್ ಅವರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದರು.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ 91 ಸೀಟುಗಳನ್ನು ಗೆಲ್ಲುವ ಮೂಲಕ ಮತ್ತೆ ಕೇರಳದ ಆಡಳಿತದ ಚುಕ್ಕಾಣಿ ಹಿಡಿದಿತ್ತು.
ಕರೊನಾ ಅಲೆ ಇರುವುದರಿಂದ ಪ್ರಮಾಣವಚನ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಕೇವಲ 500 ಜನಕ್ಕೆ ಮಾತ್ರ ಕಾರ್ಯಕ್ರಮಕ್ಕೆ ಭಾಗವಹಿಸಲು ಅವಕಾಶ ನೀಡಲಾಗಿತ್ತು.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ 23 ಮಂದಿ ಸಂಪುಟ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ
ಆಫೀಸ್ಗೆ ಬರ್ತಾನೆ, ಪದೇ ಪದೇ ಟಾಯ್ಲೆಟ್ಗೆ ಓಡ್ತಾನೆ- ಏನ್ ಮಾಡೋದು? ಇಂಟರ್ನೆಟ್ ಮೊರೆ ಹೋದ ಕಂಪೆನಿ!