More

    ಮುಸ್ಲಿಂ ಯುವಕನ ಜತೆ ಕೇರಳ ಸಿಎಂ ಪುತ್ರಿ ವೀಣಾ ಮದುವೆ ಜೂನ್ 15ಕ್ಕೆ

    ತಿರುವನಂತಪುರ: ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರ ಮದುವೆ ಮುಹಮದ್ ರಿಯಾಸ್ ಎಂಬವರೊಂದಿಗೆ ನಡೆಯುವುದು ಖಚಿತವಾಗಿದೆ ಎಂದು ಕೇರಳದ ಸ್ಥಳೀಯ ಪತ್ರಿಕೆಗಳು ಮಂಗಳವಾರ ವರದಿ ಮಾಡಿವೆ.

    ರಿಯಾಸ್ ಅವರು ಡೆಮಾಕ್ರಟಿಕ್ ಯೂಥ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್‌ಐ) ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಜೂನ್ 15ರಂದು ಅತ್ಯಂತ ಸಂಬಂಧಿಕರು ಮತ್ತು ಆಪ್ತ ಸ್ನೇಹಿತ ಬಳಗದ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಮದುವೆ ನೆರವೇರಲಿದೆ ಎಂದು ಮನೋರಮಾಆನ್‌ಲೈನ್ ವರದಿ ಮಾಡಿದೆ.

    ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಪ್ರಾರಂಭಿಸಿದ ರಿಯಾಸ್, ಡಿವೈಎಫ್‌ಐ ಸಂಘಟನೆಯ ರಾಜ್ಯ ಅಧ್ಯಕ್ಷರಾಗಿ ಎರಡು ಅವಧಿ ಕಾರ್ಯ ನಿರ್ವಹಿಸಿದ್ದಾರೆ. 2009ರ ಲೋಕಸಭಾ ಚುನಾವಣೆಯಲ್ಲಿ ಅವರು ಕೋಯಿಕ್ಕೋಡ್ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್ ನಾಯಕ ಎಂ.ಕೆ. ರಾಘವನ್ ವಿರುದ್ಧ ಸೋತರು. ವೀಣಾ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಿಯಾಗಿದ್ದಾರೆ.

    ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಮುಗಿಯುತ್ತಿದ್ದಂತೆ ತಾರಕಕ್ಕೇರಿತು ಅರ್ಜುನ್​ ಸರ್ಜಾ ಸಿಟ್ಟು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts