More

    ಸ್ವಚ್ಛತೆಗೆ ಆದ್ಯತೆ ನೀಡಿ

    ಗಂಗಾವತಿ: ಕಚೇರಿ, ಸುತ್ತಲಿನ ಪರಿಸರ ಸ್ವಚ್ಛವಾಗಿದ್ದಾಗ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯ ಎಂದು ತಾಪಂ ಯೋಜನಾಧಿಕಾರಿ ಎಸ್. ಗುರುಪ್ರಸಾದ್ ಹೇಳಿದರು.

    ತಾಪಂ ಕಚೇರಿ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸ್ವಚ್ಛತಾ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು. ಕಚೇರಿ ಕಾರ್ಯಕ್ಕಾಗಿ ಬರುವ ಜನರಿಗೆ ಪರಿಸರದ ಬಗ್ಗೆ ಉತ್ತಮ ಅಭಿಪ್ರಾಯವಿರಬೇಕು. ವಾತಾವರಣ ಸ್ವಚ್ಛವಿದ್ದರೆ ಆರೋಗ್ಯ ಕಾಪಾಡಲು ಸಾಧ್ಯ. ಗಿಡಮರಗಳನ್ನು ಬೆಳೆಸುವುದರ ಜತೆಗೆ ತ್ಯಾಜ್ಯ ವಿಲೇವಾರಿಯತ್ತ ಗಮನಹರಿಸಬೇಕು. ಸಿಬ್ಬಂದಿ ಸ್ವಯಂ ಪ್ರೇರಣೆಯಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.ವಿ ಷಯ ನಿರ್ವಾಹಕರಾದ ಶ್ರೀನಿವಾಸ ಭೀಮಣ್ಣ, ರಮೇಶ, ಶರಣಪ್ಪ, ರಾಘವೇಂದ್ರ, ರಂಗಮ್ಮ, ಐಇಸಿ ಸಂಯೋಜಕ ಸೋಮನಾಥ ನಾಯಕ, ತಾಂತ್ರಿಕ ಸಂಯೋಜಕ ಬಸವರಾಜ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts