ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಬೇಡ, ಇದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ; ಸಿಎಂ, ಆರೋಗ್ಯ ಸಚಿವರಿಗೆ ಶಾಸಕ ರಘುಪತಿ ಭಟ್​ ಮನವಿ

ಉಡುಪಿ: ಕರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಆ ಪೈಕಿ ಧಾರ್ಮಿಕ ಕಾರ್ಯಕ್ರಮಗಳೂ ಸೇರಿವೆ. ಆದರೆ ಇದೀಗ ಜನರ ಧಾರ್ಮಿಕ ಭಾವನೆಗಳಿಗೆ ಅಡ್ಡಿಪಡಿಸಬೇಡಿ, ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಿ ಎಂಬುದಾಗಿ ಆಡಳಿತ ಪಕ್ಷದಿಂದಲೇ ಒತ್ತಾಯ ಕೇಳಿಬಂದಿದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡಬೇಕು, ಅದಕ್ಕೆ ಅಡ್ಡಿಪಡಿಸುವುದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಆ ಸಂಬಂಧಿತ ನಿರ್ಬಂಧದ ಆದೇಶ ಹಿಂದಕ್ಕೆ ಪಡೆಯಿರಿ ಎಂಬುದಾಗಿ ಮುಖ್ಯಮಂತ್ರಿ … Continue reading ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಬೇಡ, ಇದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ; ಸಿಎಂ, ಆರೋಗ್ಯ ಸಚಿವರಿಗೆ ಶಾಸಕ ರಘುಪತಿ ಭಟ್​ ಮನವಿ