ಬೆಂಗಳೂರು: ಮಕರ ಸಂಕ್ರಾಂತಿ ಸಂಭ್ರಮದ ಸಂದರ್ಭದಲ್ಲೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಹುದೊಡ್ಡ ಭರವಸೆಯನ್ನು ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಅದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಗ್ರಾಮೀಣ ಯೋಜನೆಯಡಿ ಭಾರಿ ಸಂಖ್ಯೆಯ ಹೊಸಮನೆ ಹಾಗೂ ನಿವೇಶನಗಳನ್ನು ಕರ್ನಾಟಕಕ್ಕೆ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಈ ಮೂಲಕ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಬೇಡಿಕೆಗೆ ಈಡೇರುವ ಸಮಯ ಸಮೀಪಿಸಿದಂತಾಗಿದೆ.
ಕರ್ನಾಟಕಕ್ಕೆ 18,78,671 ಮನೆಗಳನ್ನು ಹಾಗೂ 6,61,535 ನಿವೇಶನಗಳನ್ನು ಪ್ರಧಾನ ಮಂತ್ರಿ ಆವಾಸ್ ಗ್ರಾಮೀಣ ಯೋಜನೆಯಡಿ ನೀಡಲಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ತಿಳಿಸಿದ್ದಾರೆ.
ಗಾಂಜಾ ಮತ್ತಿನಲ್ಲಿ ಬಡಿದಾಡಿಕೊಂಡ ಕಳ್ಳರು; ಒಬ್ಬ ಕೆಳಕ್ಕೆ ಹಾರಿ, ಮೇಲೆ ಹೋದ..!
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ; ಕೊಲೆಯಾಗಿ ಹೋದ ತಾಲೂಕು ಪಂಚಾಯತ್ ಉಪಾಧ್ಯಕ್ಷನ ಸಹೋದರ