ನವದೆಹಲಿ: ಸಾಂಕ್ರಾಮಿಕ ಕಾಯಿಲೆ ಕೊವಿಡ್-19 ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಈಗಾಗಲೇ ಹಲವು ಬಾರಿ ಆರೋಪ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದೀಗ ಮತ್ತೊಮ್ಮೆ ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದ ಬೆನ್ನಲ್ಲೇ ಇಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೊವಿಡ್-19 ದೇಶದ ಅನೇಕ ಭಾಗಗಳಿಗೆ ವ್ಯಾಪಿಸುತ್ತಿದೆ. ಇದುವರೆಗೆ ಇರದ ಪ್ರದೇಶಗಳಲ್ಲೂ ಕಾಣಿಸಿಕೊಳ್ಳುತ್ತಿದೆ. ಕರೊನಾ ನಿಯಂತ್ರಣ, ನಿರ್ಮೂಲನೆಗಾಗಿ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನೂ ಜಾರಿ ಮಾಡುತ್ತಿಲ್ಲ. ಇದನ್ನೂ ಓದಿ: ಮುಂದುವರಿದ ಕರೊನಿಲ್ ವಿವಾದ; ಯೋಗಗುರು ಬಾಬಾ ರಾಮ್ದೇವ್ ಸೇರಿ ಐವರ ವಿರುದ್ಧ ಎಫ್ಐಆರ್
ಪ್ರಧಾನಿ ನರೇಂದ್ರ ಮೋದಿಯವರು ಮೌನಕ್ಕೆ ಜಾರಿದ್ದಾರೆ. ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ ಎಂದು ಒಪ್ಪಿಕೊಂಡು, ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿಯವರಿಗೆ ಕೊವಿಡ್-19; ಇಡೀ ಕುಟುಂಬಕ್ಕೆ ತಗುಲಿದ ಸೋಂಕು
ಭಾರತದಲ್ಲಿ ಕರೊನಾ ವ್ಯಾಪಕವಾಗುತ್ತಿದೆ. ಇದುವರೆಗೆ ಒಂದೂ ಸೋಂಕಿನ ಪ್ರಕರಣಗಳು ಇಲ್ಲದ ಸ್ಥಳಗಳಿಗೂ ಕಾಲಿಟ್ಟಿದೆ ಎಂಬ ಮಾಧ್ಯಮವೊಂದರ ವರದಿಯನ್ನು ಶೇರ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಕೆಲವು ವಾರಗಳಿಂದಲೂ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದೆ. ಕೊವಿಡ್-19, ಆರ್ಥಿCoronavirus,ಕತೆ, ಭಾರತ-ಚೀನಾ ವಿವಾದಗಳಿಗೆ ಸಂಬಂಧಪಟ್ಟ ವಿಷಯಗಳನ್ನಿಟ್ಟುಕೊಂಡು ಕಿಡಿಕಾರುತ್ತಿದೆ.(ಏಜೆನ್ಸೀಸ್)