ತಮಿಳುನಾಡಿನ ಕೊನೂರಿನ ಸಮೀಪ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ.
ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪಿಎಂ, ಜನರಲ್ ಬಿಪಿನ್ ರಾವತ್ ಓರ್ವ ಅತ್ಯುತ್ತಮ ಸೈನಿಕರಾಗಿದ್ದರು. ನಿಜವಾದ ದೇಶಭಕ್ತ. ಭಾರತೀಯ ಸಶಸ್ತ್ರ ಪಡೆ ಮತ್ತು ಭದ್ರತಾ ಉಪಕರಣ ಆಧುನೀಕರಣಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿಧನ ನನಗೆ ತೀವ್ರ ದುಃಖ ತಂದಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
Gen Bipin Rawat was an outstanding soldier. A true patriot, he greatly contributed to modernising our armed forces and security apparatus. His insights and perspectives on strategic matters were exceptional. His passing away has saddened me deeply. Om Shanti. pic.twitter.com/YOuQvFT7Et
— Narendra Modi (@narendramodi) December 8, 2021
ಬೊಮ್ಮಾಯಿ ತೀವ್ರ ಸಂತಾಪ:
ದೇಶದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜನರಲ್ ರಾವತ್, ಅವರ ಪತ್ನಿ ಹಾಗೂ ಇತರ ಸೇನಾ ಸಿಬ್ಬಂದಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ಆಘಾತಕಾರಿ ಎಂದು ಹೇಳಿದ್ದಾರೆ.
ದೇಶದ ಸೇನಾಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಅವರ ನಿಧನದಿಂದ ನಾನು ದಿಗ್ಭ್ರಾಂತನಾಗಿದ್ದೇನೆ. ನಿಜಕ್ಕೂ ಇದು ದುರದೃಷ್ಟಕರ, ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಅಪಘಾತಕ್ಕೆ ಈಡಾಗಿರುವುದು ದುರಂತವೇ ಸರಿ. ಅವರ ಜತೆ ಅವರ ಪತ್ನಿ ಮಧುಲಿಕಾ ರವಾತ್ ಸೇರಿದಂತೆ ಇತರೆ 11 ಜನ ಸಾವನ್ನಪ್ಪಿರುವುದು ಹೃದಯ ಕಲುಕುವ ಸಂಗತಿಯಾಗಿದೆ. pic.twitter.com/bvHN2Qk9bX
— Basavaraj S Bommai (@BSBommai) December 8, 2021
ಬಿಎಸ್ವೈ ಸಂತಾಪ:
ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ಸೇನಾ ಸಿಬ್ಬಂದಿ ದುರಂತ ಸಾವಿನ ಬಗ್ಗೆ ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
Shocked and saddened beyond words at the most tragic death of CDS Gen Bipin Rawat, his wife, and 11 other Officers in the helicopter crash. My deepest condolences to the bereaved family members and prayers for the injured officer. Om Shanti
— B.S. Yediyurappa (@BSYBJP) December 8, 2021
ಇನ್ನು ಅನೇಕ ರಾಷ್ಟ್ರ ಮತ್ತು ರಾಜ್ಯ ನಾಯಕರು, ಗಣ್ಯರು ಬಿಪಿನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಜನರಿಗೆ ಸೂಕ್ತ ಮಾಹಿತಿ ನೀಡುವಂತೆ ತನಿಖೆಯಾಗಬೇಕು: ಸುಬ್ರಮಣ್ಯಸ್ವಾಮಿ